Featured

ಕಾರ್ಕಳ : ಮತದಾನಕ್ಕೂ ಮೊದಲು ಅಭಿವೃದ್ದಿ ಕೆಲಸವನ್ನೊಮ್ಮೆ ನೆನಪಿಸಿಕೊಳ್ಳಿ : ಸುನಿಲ್ ಕುಮಾರ್  – Vishwanews24

ಕಾರ್ಕಳ : ಮತದಾನಕ್ಕೂ ಮೊದಲು ಅಭಿವೃದ್ದಿ ಕೆಲಸವನ್ನೊಮ್ಮೆ ನೆನಪಿಸಿಕೊಳ್ಳಿ : ಸುನಿಲ್ ಕುಮಾರ್

ಕಾರ್ಕಳ : ಶಾಸಕ, ಸಚಿವನಾಗಿ ಆ ಸ್ಥಾನವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ್ದೇನೆ ಎಂಬ ವಿಶ್ವಾಸವಿದೆ. ಸಾಮಾನ್ಯರ ಸಂಕಷ್ಟಗಳಿಗೆ ಸಂವೇದನಾಶೀಲನಾಗಿ ಸ್ಪಂದಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಕಾರ್ಕಳದ ಅಭಿವೃದ್ಧಿಯ ಕನಸು ಹೊತ್ತು ಕೆಲಸ ಮಾಡುತ್ತಿರುವ ನನಗೆ ಸ್ವರ್ಣ ಕಾರ್ಕಳದ ನಿರ್ಮಾಣಕ್ಕಾಗಿ ಮತ್ತೊಮ್ಮೆ ಅವಕಾಶ ನೀಡುವಂತೆ ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಮನವಿ ಮಾಡಿದರು.

ಬೆಳ್ಮಣ್‌ ಪರಿಸರದಲ್ಲಿ ಮತಯಾಚಿಸಿ ಮಾತನಾಡಿದರು.ಅನೇಕ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ಸಾಕಾರವಾಗಿದೆ. ಅಂತರ್ಜಲ ವೃದ್ಧಿಗೆ ದಾಖಲೆ ಕಿಂಡಿ ಅಣೆಕಟ್ಟುಗಳು, ಕೆರೆಗಳ ಅಭಿವೃದ್ಧಿ, ಸರಕಾರಿ, ಆಸ್ಪತ್ರೆ, ಕಟ್ಟಡಗಳ ಆಧುನೀಕರಣ, ಶಿಕ್ಷಣದ ಕ್ಷೇತ್ರದ ಉನ್ನತೀಕರಣ, ಸೇತುವೆಗಳು, ದ್ವಿಪಥ-ಚತುಷ್ಪಥ ರಸೆೆ¤ಗಳು, ಕಾರ್ಕಳ ಉತ್ಸವದಂತಹ ಅಭೂತಪೂರ್ವ ಕಾರ್ಯಕ್ರಮ, ದೇಶದ ಗಮನ ಸೆಳೆದ ಕರಾವಳಿಯ ಸೃಷ್ಟಿಕರ್ತ ಪರಶುರಾಮನ ಥೀಂ ಪಾರ್ಕ್‌ ನಿರ್ಮಾಣ, ಕಾರ್ಕಳದ ಜನತೆಗೆ ಉದ್ಯೋಗ ಕಲ್ಲಿಸಿಕೊಡಲಿರುವ ಜವಳಿ ಪಾರ್ಕ್‌ ಸೇರಿದಂತೆ ಅನೇಕ ಜನಹಿತ ಕಾರ್ಯಗಳು ಸಾಕಾರಗೊಂಡಿವೆ ಎಂದರು.

ಸ್ವರ್ಣ ಕಾರ್ಕಳದ ಸಾರ್ಥಕ ಹಾದಿ
ರೈತರ, ಕುಡಿಯುವ ನೀರಿನ ಸಮಸ್ಯೆ ಪರಿಹಾರ, 108 ಕೋ.ರೂ ವೆಚ್ಚದಲ್ಲಿ ಎಣ್ಣೆಹೊಳೆ ನೀರಾವರಿ ಯೋಜನೆ ಅನುಷ್ಠಾನ, ಮುಖ್ಯ ರಸ್ತೆ, ಗ್ರಾಮೀಣ ರಸೆೆ¤ಗಳ ಅಭಿವೃದ್ಧಿ, ಹೆಬ್ರಿ ತಾಲೂಕಿಗೆ ಸಂಪೂರ್ಣ ಆಡಳಿತ, ಆಡಳಿತ ಸೌಧ, ಪ್ರವಾಸಿ ಮಂದಿರ, ಪೊಲೀಸ್‌ ಠಾಣೆ, ತಾ.ಪಂ ಕಚೇರಿ, ನೂತನ ಬಸ್‌ ನಿಲ್ದಾಣ ಕಾಮಗಾರಿ ಆರಂಭ, ಸುಸಜ್ಜಿತ ತಾಲೂಕು ಆಸ್ಪತ್ರೆ, ಡಯಾಲಿಸಿಸ್‌ ಕೇಂದ್ರ, ಆಮ್ಲಜನಕ ಉತ್ಪಾದನಾ ಘಟಕ, ಮಕ್ಕಳ ತೀವೃ ನಿಗಾ ಘಟಕ ಸ್ಥಾಪನೆ, 25 ವರ್ಷಗಳ ಹಳೆಯ ಚರಂಡಿ ವ್ಯವಸ್ಥೆ ಮರುನಿರ್ಮಾಣ, ವೈಜ್ಞಾಾನಿಕ, ಆಧುನಿಕ ತಂತ್ರಜ್ಞಾಾನ ಬಳಕೆ, ನಿಟ್ಟೆ ಎಂಆ‌ರ್ ಎಫ್ ಘಟಕ, ಹೆಬ್ರಿಯಲ್ಲಿ ಮಿನಿ ಎಂಆ‌ರ್ .ಎಫ್ ಘಟಕ ಸ್ಥಾಪನೆ ಮೂಲಕ ತ್ಯಾಜ್ಯ ಮುಕ್ತಿ, ಸ್ವಚ್ಛತೆಗೆ ಆದ್ಯತೆ, ಪೇಟೆಗಳ ಸಮಗ್ರ ಅಭಿವೃದ್ಧಿ ಜೋಡುರಸ್ತೆ, ಬಜಗೋಳಿ, ಮುನಿಯಾಲು, ಬೈಲೂರು 4 ಪಥದ ರಸ್ತೆಗಳಾಗಿ ಪರಿವರ್ತನೆ, ಹೆಬ್ರಿ ಮತ್ತು ನಲ್ಲೂರಿನಲ್ಲಿ ಹರಿಯಪ್ಪನ ಕೆರೆ ಬಳಿ ಆಕರ್ಷಕ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್‌ ನಿರ್ಮಾಣ, ತಾಲೂಕು ಕಚೇರಿ ಬಳಿ ಅತ್ಯಾಕರ್ಷಕ ವಾಜಪೇಯಿ ಉದ್ಯಾನವನ, ಪ್ರವಾಸಿಗರ ಆಕರ್ಷನೆಯ ಕೇಂದ್ರವಾಗಿ ನವರೂಪ ಪಡೆಯುತ್ತಿರುವ ಕೋಟಿ ಚೆನ್ನಯ ಥೀಂ ಪಾರ್ಕ್, ಆರನೇ ಯಕ್ಷರಂಗಾಯಣ ಕೇಂದ್ರ ಕಾರ್ಕಳದಲ್ಲಿ ನಿರ್ಮಾಣ, ಬಿ.ಎಸ್ಸಿ ನರ್ಸಿಂಗ್‌ ಕಾಲೇಜು, ಜರ್ಮನ್‌ ತಂತ್ರಜ್ಞಾಾನದೊಂದಿಗೆ ಯುವಕರಿಗೆ ಉದ್ಯೋಗ ಭದ್ರತೆ ನೀಡುವ ಕೆಜಿಟಿಟಿಐ, ಟಾಟಾ ಟೆಕ್ನಾಲಜೀಸ್‌ ಸಹಭಾಗಿತ್ವದ ಐಟಿಐ ಕಾಲೇಜು, ಕರ್ನಾಟಕ ಪಬ್ಲಿಕ್‌ ಸ್ಕೂಲ್‌ , ಹಾಸ್ಟೇಲ್‌ ಹಾಗೂ ಶಾಲಾ ಕಾಲೇಜು ಕಟ್ಟಡಗಳ ನಿರ್ಮಾಣ. ಸಾಣೂರು ಮಠದ ಕೆರೆ ಅಭಿವೃದ್ಧಿ ಮೂಲಕ ಕೃಷಿ ಭೂಮಿಗಳಿಗೆ ನೀರಧಾರೆ, ಪಳ್ಳಿ ಖೈರು ಕೆರೆ ಮುದ್ರಾಡಿ ಮದಗ ಕೆರೆ, ಹರಿಯಪ್ಪನ ಕೆರೆ, ಎಳ್ಳಾರೆ ಹೊನ್ನೆಜೆಡ್ಡು ಕೆರೆ, ಬೇಳಂಜೆ ಮಲ್ಲಿಕಾರ್ಜುನ ದೇವಸ್ಥಾನ ಕೆರೆ ಅಭಿವೃದ್ಧಿಗೊಳಿಸಲಾಗಿದೆ ಎಂದರು.

ಬಡವರ ಕಣ್ಣೀರೊರೆಸುವ ಕಾರ್ಯ
ದಾಖಲೆಯಲ್ಲಿ 94ಸಿ, 94 ಸಿಸಿ ಹಕ್ಕುಪತ್ರಗಳ ವಿತರಣೆ, 6 ಕೋ.ರೂ ವೆಚ್ಚದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣ, ಮಾಳದಲ್ಲಿ ಮಲೆಕುಡಿಯ ಸಭಾಭವನ ನಿರ್ಮಾಣ, ಗ್ರಾಮಗಳಲ್ಲಿ ಸಮುದಾಯ ಭವನ ನಿರ್ಮಾಣ., ದೇವಸ್ಥಾನ, ದೈವಸ್ಥಾನಗಳ ಅಭಿವೃದ್ದಿಗೆ ನೆರವು, ಮೆಸ್ಕಾಂ ವಿಭಾಗೀಯ ಕಚೇರಿ, ನಿಟ್ಟೆ ಉಪವಿಭಾಗ ಕಚೇರಿ, ಶಾಖಾ ಕಚೇರಿಗಳ ಸಾಾ§ಪನೆ, ಬೆಳ್ಮಣ್‌ , ಅಜೆಕಾರು, ಬಜಗೋಳಿ ಹಾಗೂ ಬೈಲೂರಿನಲ್ಲಿ ವಿದ್ಯುತ್‌ ಉಪಕೇಂದ್ರಗಳ ನಿರ್ಮಾಣ ಹೆಚ್ಚುವರಿ ಟಿ.ಸಿಗಳ ಅಳವಡಿಕೆ, ಬಡ ಜನರಿಗೆ ಬೆಳಕು ಯೋಜನೆಯಲ್ಲಿ ಉಚಿತ ವಿದ್ಯುತ್‌ , ಕಾರ್ಕಳ ಕೋರ್ಟ್‌ , ತಾ ಪಂ, ಪೊಲೀಸ್‌ ಅತಿಥಿಗೃಹ, ದೇವರಾಜು ಅರಸು ಭವನ, ಅಕ್ಷರ ಭವನ ಸೇರಿ ಸರಕಾರಿ ಕಟ್ಟಡಗಳ ನವೀಕರಣ, ಕೋವಿಡ್‌ ಸಂದರ್ಭ ಮುಂಬಯಿ, ಪುಣೆ, ಬೆಂಗಳೂರಿನ ಬಂಧುಗಳಿಗೆ ಕ್ವಾರಂಟೈನ್‌ ಕ್ಷೇತ್ರದ ಜನತೆಯ ಸಂಕಷ್ಟಗಳಿಗೆ ವಿವಿಧ ಆಯಾಮದಲ್ಲಿ ಸ್ಪಂದನೆ, ಸ್ಥಳಿಯ ಉತ್ಪನ್ನ ಕಾರ್ಲಕಜೆ, ಬಿಳಿಬೆಂಡೆಗೆ ಬ್ರ್ಯಾಂಡ್‌ ಬೆಳೆಯನ್ನಾಗಿಸಿ ಉತ್ತೇಜನ, ವಾತ್ಸಲ್ಯ ಆರೋಗ್ಯ ತಪಾಸಣೆ ಮೂಲಕ 40 ಸಾವಿರ ಮಕ್ಕಳ ಆರೋಗ್ಯ ತಪಾಸಣೆ, ಭಾಷೆ, ಸಂಸ್ಕೃತಿ, ಕಲೆಯ ಸಂಭೃಮ ಕಾರ್ಕಳ ಉತ್ಸವ-2022. ಸ್ವರ್ಣ ಕಾರ್ಕಳದ ಮುಕುಟ ಪ್ರಾಯವಾದ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಮೊದಲಾದ ಕಾರ್ಯಗಳ ಮೂಲಕ ಅಮೂಲಾಗ್ರ ಬದಲಾವಣೆ ತರಲಾಗಿದೆ ಎಂದರು.

5 ವರುಷ ಅವಧಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧಿಸಲಾಗಿದೆ.ಮುಂದೆಯೂ ಮತ್ತಷ್ಟೂ ಅಭಿವೃದ್ಧಿ ಚಿಂತನೆ, ಯೋಚನೆ ಜತೆಗೆ ಸಾಧಿಸುವ ಹಂಬಲ ನನ್ನಲ್ಲಿದೆ. ಇದುವರೆಗೆ ಆಗಿರುವ ಅಭಿವೃದ್ದಿಯನ್ನು ನೆನಪಿಸಿಕೊಳ್ಳುತ್ತಲೆ ಮುಂದೆ ಆಗಬೇಕಾದ ಕಾರ್ಯಗಳ ಕಡೆ ಗಮನಹರಿಸಬೇಕಿದೆ. ಹೀಗಾಗಿ ಕಾರ್ಕಳದ ಜನತೆ ಮತ್ತೂಮ್ಮೆ ನನ್ನನ್ನು ಬೆಂಬಲಿಸಿ ಅವಕಾಶ ನೀಡುವಂತೆ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

3 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

3 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

3 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

3 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

3 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

3 days ago