ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ ಕುಕ್ಕುಂದೂರು ನಲ್ಲಿ ನಡೆದಿದೆ.
ಇಲ್ಲಿನ ಜೋಡುರಸ್ತೆ ನಿವಾಸಿ ಜಗದೀಶ್ ಬಿ.ಎ. ಅವರ ಮನೆಯಲ್ಲಿ ಕಳ್ಳತನವಾಗಿದ್ದು, ರಾತ್ರಿ ಮನೆಯ ಬಾಗಿಲು ಹಾಕಿ ಭದ್ರಪಡಿಸಿ ಮಲಗಿದ್ದರು. ಆದರೆ ಬೆಳಗ್ಗಿನ ಜಾವ 3: 40 ಗಂಟೆಗೆ ಜಗದೀಶ್ ರವರು ಮಲಗಿದ್ದ ಕೋಣೆಯು ತೆರೆದ ಶಬ್ದ ಕೇಳಿ ಎದ್ದು ನೋಡಿದಾಗ ಮನೆಯ ಮುಂದಿನ ಬಾಗಿಲು ಅರ್ಧ ತೆರೆದಿದ್ದು, ಪಕ್ಕದಲ್ಲಿದ್ದ ಕಿಟಕಿಯ ಚಿಲಕವನ್ನು ತುಂಡರಿಸಿರುವುದು ಕಂಡುಬಂದಿದೆ.
ಮನೆಯೊಳಗೆ ಪರಿಶೀಲಿಸಿ ನೋಡಿದಾಗ ಯಾರೋ ಕಳ್ಳರು ಮನೆಯ ಮುಖ್ಯದ್ವಾರದ ಪಕ್ಕದಲ್ಲಿದ್ದ ಕಿಟಕಿಯ ಚಿಲಕವನ್ನು ತುಂಡರಿಸಿ ಬಾಗಿಲಿನ ಚಿಲಕವನ್ನು ಕಿಟಿಕಿಯ ಮೂಲಕ ತೆರೆದು ಮನೆಯೊಳಗೆ ಪ್ರವೇಶಿಸಿ ಮನೆಯ ಇನ್ನೊಂದು ಕೋಣೆಯೊಳಗೆ ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಹುಡುಕಾಡಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2,25,000 ರೂ. ನಗದು ಎಗರಿಸಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…