Featured

ಕಾರ್ಕಳ: ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣ : 3ನೇ ಆರೋಪಿ ಶಾಲಾ ಶಿಕ್ಷಕಿ! vishwanews24

ಕಾರ್ಕಳ: ಸಾಣೂರು ವೇಶ್ಯಾವಾಟಿಕೆ ಪ್ರಕರಣ :  3ನೇ ಆರೋಪಿ ಶಾಲಾ ಶಿಕ್ಷಕಿ!

ಕಾರ್ಕಳ : ಸಾಣೂರಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣದಲ್ಲಿ ಭಾಗಿಯಾಗಿ ಆರೋಪಿಗಳ ಪೈಕಿ ಮೂರನೇ ಆರೋಪಿ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯೊಂದರ ಶಿಕ್ಷಕಿ ಎಂಬ ಅಘಾತಕಾರಿ ಮಾಹಿತಿ ಹೊರಬಿದ್ದಿದೆ.

ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್ ನ ಪ್ರಮೀಳಾ ವಿಜಯಕುಮಾರ್ ಜೈನ್ ಎಂಬಾಕೆಗೆ ಸೇರಿದ ಮನೆಯಲ್ಲಿ ಕಳೆದ ಕೆಲ ವರ್ಷಗಳಿಂದ ನಿರಂತರವಾಗಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂದು ಸಾರ್ವಜನಿಕರು ಆರೋಪಿಸಿದ್ದರು. ಖಚಿತ ಮಾಹಿತಿ ಮೇರೆಗೆ ಪ್ರಭಾರ ಎಎಸ್‌ಪಿ ಜಯಶ್ರೀ ಎಸ್.ಮಾನೆ ಅವರ ನೇತೃತ್ವದಲ್ಲಿ ಪೊಲೀಸರ ತಂಡವರು ಸೆಪ್ಟೆಂಬರ್ 8 ರಂದು ದಿಢೀರ್ ದಾಳಿ ನಡೆಸಿದಾಗ ವೇಶ್ಯಾವಾಟಿಕೆ ಕೃತ್ಯ ಬೆಳಕಿಗೆ ಬಂದಿದೆ.

ದಾಳಿ ವೇಳೆ ಸಂತ್ರಸ್ತೆಯೋರ್ವಳನ್ನು ರಕ್ಷಿಸಲಾಗಿದೆ. ಘಟನಾ ಸ್ಥಳದಿಂದ 6,000 ರೂ. ನಗದು, ಕೃತ್ಯಕ್ಕೆ ಬಳಸಿಕೊಳ್ಳಲಾಗುತ್ತಿದ್ದ ವಸ್ತುಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

1ನೇ ಆರೋಪಿ ಭರತ್ ಜೈನ್ ನಾರಾವಿ ಅಲಿಯಾಸ್ ಭರತ್ ಶೆಟ್ಟಿ, 2ನೇ ಆರೋಪಿ ಉಳ್ಳಾಲದ ಸಂಪತ್ ಈತ ಯುವತಿ, ಮಹಿಳೆಯರನ್ನು ತನ್ನ ಗಾಳಕ್ಕೆ ಬಳಸಿ ಪುರುಷರಿಗೆ ಸರಬರಾಜು ಮಾಡುತ್ತಿದ್ದನೆಂಬ ಮಾಹಿತಿ ಲಭಿಸಿದೆ. 3ನೇ ಆರೋಪಿ ಈದು ಪ್ರಮೀಳಾ ವಿಜಯಕುಮಾರ್ ಜೈನ್ ಆಗಿದ್ದಾಳೆ. ಈಕೆ ಹೊಸ್ಮಾರು ಸರಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು, ಪತಿ ಈದು ಗ್ರಾಮ ಪಂಚಾಯತ್‌ನ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ ರಾಜಕೀಯ ದುರೀಣ ಎಂಬ ಮಾಹಿತಿ ತಿಳಿದುಬಂದಿದೆ. ಪ್ರಮುಖ ಆರೋಪಿ ನಾರಾವಿಯ ಭರತ್ ಜೈನ್ ಅಲಿಯಾಸ್ ಭರತ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ತನಿಖೆ ಪ್ರಗತಿಯಲ್ಲಿದ್ದು, ಪ್ರಕರಣದಲ್ಲಿ ಇತರರು ಭಾಗಿಯಾಗಿರುವ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಪ್ರಭಾರ ಎಎಸ್‌ಪಿ ಜಯಶ್ರೀ ಎಸ್.ಮಾನೆ ಅವರ ನೇತೃತ್ವದಲ್ಲಿ ಪೊಲೀಸರ ತಂಡದವರ ಕಾರ್ಯಚರಣೆಗೆ ವ್ಯಾಪಕ ಪ್ರಶಂಸೆ ವ್ಯಕ್ತಗೊಂಡಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago