ಕಾರ್ಕಳ: ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ಎಂಬಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ ಮಾರುತಿ ನಗರದ ಚಂದ್ರಗೌಡ ಪಾಟೀಲ್(56) ಬಂಧಿತ ಆರೋಪಿ. ಈತನಿಂದ ಕಳವು ಮಾಡಿದ್ದ 5.50 ಲಕ್ಷ ರೂ.
ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಫೆ.23ರಂದು ಪಾದೆಮನೆ ರಾಘವೇಂದ್ರ ಭಟ್ ಎಂಬವರ ಮನೆಯ ಕಪಾಟಿನ ಬಾಗಿಲು ತೆರೆದು ಸುಮಾರು ಐದೂವರೆ ಲಕ್ಷ ವೌಲ್ಯದ ಚಿನ್ನದ ಆಭರಣಗಳು ಮತ್ತು 5500ರೂ. ನಗದು ಕಳವು ಮಾಡಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಉಡುಪಿ ಎಸ್ಪಿ ಅಕ್ಷಯ ಹಾಕೆ ಸೂಚನೆಯಂತೆ ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗಜ್ಜಿ ಮಾರ್ಗದರ್ಶನದಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಸಿಬ್ಬಂದಿ ಗಿರೀಶ್, ಪ್ರಶಾಂತ್, ಅಶೋಕ್, ವಿಶ್ವನಾಥ್, ಗಣೇಶ್ ಮತ್ತು ರುಕ್ಮಿಣಿ ಈ ಕಾರ್ಯಾಚರಣೆ ನಡೆಸಿದ್ದು, ಎಸ್.ಪಿ ಕಚೇರಿಯ ದಿನೇಶ್ ಮತ್ತು ಶಿವಾನಂದ್ ಪತ್ತೆ ಕಾರ್ಯಕ್ಕೆ ಸಹಕರಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…