ಕಾರ್ಕಳ: ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ಎಂಬಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ ಮಾರುತಿ ನಗರದ ಚಂದ್ರಗೌಡ ಪಾಟೀಲ್(56) ಬಂಧಿತ ಆರೋಪಿ. ಈತನಿಂದ ಕಳವು ಮಾಡಿದ್ದ 5.50 ಲಕ್ಷ ರೂ.
ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಫೆ.23ರಂದು ಪಾದೆಮನೆ ರಾಘವೇಂದ್ರ ಭಟ್ ಎಂಬವರ ಮನೆಯ ಕಪಾಟಿನ ಬಾಗಿಲು ತೆರೆದು ಸುಮಾರು ಐದೂವರೆ ಲಕ್ಷ ವೌಲ್ಯದ ಚಿನ್ನದ ಆಭರಣಗಳು ಮತ್ತು 5500ರೂ. ನಗದು ಕಳವು ಮಾಡಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಉಡುಪಿ ಎಸ್ಪಿ ಅಕ್ಷಯ ಹಾಕೆ ಸೂಚನೆಯಂತೆ ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗಜ್ಜಿ ಮಾರ್ಗದರ್ಶನದಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಸಿಬ್ಬಂದಿ ಗಿರೀಶ್, ಪ್ರಶಾಂತ್, ಅಶೋಕ್, ವಿಶ್ವನಾಥ್, ಗಣೇಶ್ ಮತ್ತು ರುಕ್ಮಿಣಿ ಈ ಕಾರ್ಯಾಚರಣೆ ನಡೆಸಿದ್ದು, ಎಸ್.ಪಿ ಕಚೇರಿಯ ದಿನೇಶ್ ಮತ್ತು ಶಿವಾನಂದ್ ಪತ್ತೆ ಕಾರ್ಯಕ್ಕೆ ಸಹಕರಿಸಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…