ಮಂಗಳೂರು: ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಬೃಹತ್ ಏಕಶಿಲಾ ಮೂರ್ತಿಯ ಮಹಾ ಮಸ್ತಕಾಭಿಷೇಕ
2027ರಲ್ಲಿ ನಡೆಯಲಿದ್ದು, ಕಾರ್ಕಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಕಳ ನಗರಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಲು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಅವರಿಗೆ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರು ಮನವಿ ಮಾಡಿದರು.
ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬ ಸಂದೇಶವನ್ನು ವಿಶ್ವಕ್ಕೆ ಪಸರಿಸುತ್ತಿರುವ ಬಾಹುಬಲಿ ಸ್ವಾಮಿಯ ದಿವ್ಯ ಚೇತನ ಸರ್ವಧರ್ಮೀಯರಿಗೂ ಆದರಣೀಯವಾಗಿದೆ. ಇಂತಹ ಸಂದೇಶದ ಜತೆಗೆ ಶ್ರದ್ಧಾ ಭಕ್ತಿಯಿಂದ ನಡೆಯುವ 2027ರ ಮಹಾಮಸ್ತಕಾಭಿಷೇಕವು ಧಾರ್ಮಿಕ ನೆಲೆಯ ಆರಾಧನಾ ಪರಂಪರೆಯನ್ನು ಬಿಂಬಿಸಲಿದೆ. ಈ ನಿಟ್ಟಿನಲ್ಲಿ 2027ರ ಮಹಾಮಸ್ತಕಾಭಿಷೇಕ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲು ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಾಕಾಭಿಷೇಕ ಸಮಿತಿ ನಿರ್ಧರಿಸಿದೆ.
ಇದನ್ನೂ ಓದಿ👇
ಮಹಾಮಸ್ತಾಕಾಭಿಷೇಕದ ವೇಳೆ ಲಕ್ಷಾಂತರ ಭಕ್ತ ಜನರು ಕಾರ್ಕಳಕ್ಕೆ ಬರುವ ಸಾಧ್ಯತೆಯಿದೆ. ಈ ಸಂದರ್ಭ ಕಾರ್ಕಳ ನಗರದಲ್ಲಿ ವಿವಿಧ ಕಾಮಗಾರಿ ನಡೆಯಬೇಕಾಗಿದ್ದು ಅದಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ಕೋರಲಾಯಿತು. ವಿವಿಧ ಇಲಾಖೆಗಳ ಮೂಲಕ ನಡೆಯಬೇಕಾದ ಕಾಮಗಾರಿಗಳ ವಿವರವಾದ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭ ಮೇಘರಾಜ್ ಆರ್. ಜೈನ್ ಹಾಗೂ ಇನಾಯತ್ ಅಲಿ ಇದ್ದರು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…