ಮಂಗಳೂರು: ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಬೃಹತ್ ಏಕಶಿಲಾ ಮೂರ್ತಿಯ ಮಹಾ ಮಸ್ತಕಾಭಿಷೇಕ
2027ರಲ್ಲಿ ನಡೆಯಲಿದ್ದು, ಕಾರ್ಕಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಕಳ ನಗರಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಲು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಅವರಿಗೆ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರು ಮನವಿ ಮಾಡಿದರು.
ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬ ಸಂದೇಶವನ್ನು ವಿಶ್ವಕ್ಕೆ ಪಸರಿಸುತ್ತಿರುವ ಬಾಹುಬಲಿ ಸ್ವಾಮಿಯ ದಿವ್ಯ ಚೇತನ ಸರ್ವಧರ್ಮೀಯರಿಗೂ ಆದರಣೀಯವಾಗಿದೆ. ಇಂತಹ ಸಂದೇಶದ ಜತೆಗೆ ಶ್ರದ್ಧಾ ಭಕ್ತಿಯಿಂದ ನಡೆಯುವ 2027ರ ಮಹಾಮಸ್ತಕಾಭಿಷೇಕವು ಧಾರ್ಮಿಕ ನೆಲೆಯ ಆರಾಧನಾ ಪರಂಪರೆಯನ್ನು ಬಿಂಬಿಸಲಿದೆ. ಈ ನಿಟ್ಟಿನಲ್ಲಿ 2027ರ ಮಹಾಮಸ್ತಕಾಭಿಷೇಕ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲು ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಾಕಾಭಿಷೇಕ ಸಮಿತಿ ನಿರ್ಧರಿಸಿದೆ.
ಇದನ್ನೂ ಓದಿ👇
ಮಹಾಮಸ್ತಾಕಾಭಿಷೇಕದ ವೇಳೆ ಲಕ್ಷಾಂತರ ಭಕ್ತ ಜನರು ಕಾರ್ಕಳಕ್ಕೆ ಬರುವ ಸಾಧ್ಯತೆಯಿದೆ. ಈ ಸಂದರ್ಭ ಕಾರ್ಕಳ ನಗರದಲ್ಲಿ ವಿವಿಧ ಕಾಮಗಾರಿ ನಡೆಯಬೇಕಾಗಿದ್ದು ಅದಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ಕೋರಲಾಯಿತು. ವಿವಿಧ ಇಲಾಖೆಗಳ ಮೂಲಕ ನಡೆಯಬೇಕಾದ ಕಾಮಗಾರಿಗಳ ವಿವರವಾದ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭ ಮೇಘರಾಜ್ ಆರ್. ಜೈನ್ ಹಾಗೂ ಇನಾಯತ್ ಅಲಿ ಇದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…