ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಸಂಬಂಧಿಸಿದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.
ಜಿಲ್ಲಾಧಿಕಾರಿಗಳು ಮಾ.3 ರಂದು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಪ್ರಸ್ತಾವನೆಗೆ ಸರ್ಕಾರ ಮಂಜೂರಾತಿ ನೀಡಿದೆ. 2026–27ನೇ ಸಾಲಿನ ಆಯವ್ಯಯದಲ್ಲಿ ಜೈನ, ಬೌದ್ಧ ಮತ್ತು ಸಿಖ್ ಸಮುದಾಯ ಅಭಿವೃದ್ಧಿ ಯೋಜನೆಯಡಿ ಅನುದಾನ ಒದಗಿಸಲಾಗುತ್ತದೆ.
ಇದನ್ನೂ ಓದಿ:
ಈ ಅನುದಾನದ ಮೂಲಕ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ ನಿರ್ಮಾಣ, ಕಾರ್ಕಳ ಗ್ರಾಮೀಣ ಪ್ರದೇಶದಲ್ಲಿರುವ ಅಜೆಕಾರು, ರಂಜಾಳ, ಮುಂಡ್ಲಿ, ಶಿರ್ಲಾಲು ಸೂಡಿ ಮತ್ತು ನಲ್ಲೂರು ಕೂಷ್ಮಾಂಡಿನಿ ಬಸದಿಗಳ ಸಂಪರ್ಕ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ. ಜೊತೆಗೆ ಜೈನ ಮಠದ ತ್ಯಾಗಿ ಭವನ, ಮಾತಾಜಿ ಭವನ ಹಾಗೂ ಸಭಾಂಗಣ ನವೀಕರಣ, ಗೊಮ್ಮಟೇಶ್ವರ ಬೆಟ್ಟಕ್ಕೆ ನೀರಿನ ಸರಬರಾಜು ಮತ್ತು ಕೊಳವೆಬಾವಿ ನಿರ್ಮಾಣ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಯೋಜನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ, ಒಟ್ಟು ಅನುದಾನದ ಶೇ.75 ರಷ್ಟು ಮೊತ್ತವನ್ನು ಮೊದಲ ಕಂತಾಗಿ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…