ಕಾರ್ಕಳ : ಹೆಬ್ರಿ ತಾಲ್ಲೂಕು ವ್ಯಾಪ್ತಿಯ 100 ಮಂದಿ ಫಲಾನುಭವಿಗಳಿಗೆ 94 ʻಸಿʼ ಹಕ್ಕು ಪತ್ರ ಹಾಗೂ ಸರಕಾರದ ವಿವಿಧ ಇಲಾಖೆಗಳ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವು ಮಾ.3 ಶುಕ್ರವಾರ 2023 ರಂದು ಮಧ್ಯಾಹ್ನ 3 ಗಂಟೆಗೆ ಮುದ್ರಾಡಿ ಗ್ರಾಮದ ಸಮುದಾಯ ಭವನದಲ್ಲಿ ನಡೆಯಲಿದೆ.
ಸುಮಾರು ವರ್ಷಗಳಿಂದ ಬಾಕಿ ಇದ್ದಂತಹಾ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಹಕ್ಕು ಪತ್ರ ನೀಡುವ ಪ್ರಕ್ರಿಯೆಗೆ ಈಗಾಗಲೆ ಚಾಲನೆ ದೊರೆತಿದ್ದು, ಇದರ ಮುಂದುವೆರದ ಭಾಗವಾಗಿ ಮಾರ್ಚ್ 03ನೇ ತಾರೀಕಿನಂದು 100 ಹೊಸ ಫಲಾನುಭವಿಗಳಿಗೆ 94 ʻಸಿʼ ಹಕ್ಕು ಪತ್ರ ವಿತರಣೆ ಕಾರ್ಯಕ್ರಮವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮಾನ್ಯ ಸಚಿವರ ವಿಶೇಷ ಮುತುವರ್ಜಿ ಯಲ್ಲಿ ಸರಕಾರದ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು, ಸರ್ಕಾರದ ಅನೇಕ ಯೋಜನೆಗಳನ್ನು ಸಮಾಜದ ಎಲ್ಲಾ ಸ್ಥರದ ಜನರಿಗೆ ತಲುಪಿಸುವಲ್ಲಿ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…