ಕಾರ್ಕಳ : ಹೆಬ್ರಿ ತಾಲ್ಲೂಕು ವ್ಯಾಪ್ತಿಯ 100 ಮಂದಿ ಫಲಾನುಭವಿಗಳಿಗೆ 94 ʻಸಿʼ ಹಕ್ಕು ಪತ್ರ ಹಾಗೂ ಸರಕಾರದ ವಿವಿಧ ಇಲಾಖೆಗಳ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವು ಮಾ.3 ಶುಕ್ರವಾರ 2023 ರಂದು ಮಧ್ಯಾಹ್ನ 3 ಗಂಟೆಗೆ ಮುದ್ರಾಡಿ ಗ್ರಾಮದ ಸಮುದಾಯ ಭವನದಲ್ಲಿ ನಡೆಯಲಿದೆ.
ಸುಮಾರು ವರ್ಷಗಳಿಂದ ಬಾಕಿ ಇದ್ದಂತಹಾ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಹಕ್ಕು ಪತ್ರ ನೀಡುವ ಪ್ರಕ್ರಿಯೆಗೆ ಈಗಾಗಲೆ ಚಾಲನೆ ದೊರೆತಿದ್ದು, ಇದರ ಮುಂದುವೆರದ ಭಾಗವಾಗಿ ಮಾರ್ಚ್ 03ನೇ ತಾರೀಕಿನಂದು 100 ಹೊಸ ಫಲಾನುಭವಿಗಳಿಗೆ 94 ʻಸಿʼ ಹಕ್ಕು ಪತ್ರ ವಿತರಣೆ ಕಾರ್ಯಕ್ರಮವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮಾನ್ಯ ಸಚಿವರ ವಿಶೇಷ ಮುತುವರ್ಜಿ ಯಲ್ಲಿ ಸರಕಾರದ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು, ಸರ್ಕಾರದ ಅನೇಕ ಯೋಜನೆಗಳನ್ನು ಸಮಾಜದ ಎಲ್ಲಾ ಸ್ಥರದ ಜನರಿಗೆ ತಲುಪಿಸುವಲ್ಲಿ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…