ಕಾರ್ಕಳ: ತಾಲೂಕಿನ ಮಿಯಾರು ಕಂಬಳಿಕ್ರಾಸ್ ಬಳಿ ಇಂದು (ಜ.23) ಮಧ್ಯಾಹ್ನ ಖಾಸಗಿ ಬಸ್ ಮತ್ತು ತುಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಖಾಸಗಿ ಬನ್ನೊಂದು ಮಿಯಾರು ಕಂಬಳಕ್ರಾಸ್ ಬಳಿ ಅತೀ ವೇಗವಾಗಿ ಬಂದು ತಪ್ಪು ದಿಕ್ಕಿನಲ್ಲಿ ನುಗ್ಗಿದೆ ಎನ್ನಲಾಗಿದೆ. ಈ ವೇಳೆ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ತುಫಾನ್ ವಾಹನಕ್ಕೆ ಬಸ್ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತುಫಾನ್ ವಾಹನವು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು.
ಮಧ್ಯಾಹ್ನ ಸುಮಾರು 3.30ಕ್ಕೆ ಸಂಭವಿಸಿದ ಈ ದುರ್ಘಟನೆಯಲ್ಲಿ ತುಫಾನ್ನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇತರ ಆರು ಮಂದಿಯನ್ನು ತಕ್ಷಣವೇ ಕಾರ್ಕಳದ ಸರ್ಕಾರಿ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯವೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…