Featured

ಕಾರ್ಕಳ:  ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಬ್ಯಾನರ್ : ಇಬ್ಬರ ಬಂಧನ – vishwanews24

ಕಾರ್ಕಳ:  ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಬ್ಯಾನರ್ : ಇಬ್ಬರ ಬಂಧನ

ಕಾರ್ಕಳ: ಕಾರ್ಕಳ ಸಾಣೂರು ಗ್ರಾಮದ ಮುರತಂಗಡಿ ಕಮಲಾಕ್ಷ ನಗರ ಎಂಬಲ್ಲಿ ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಸೆ.3ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬ್ಯಾನರ್‌ನಲ್ಲಿ ಹೆಸರು ಉಲ್ಲೇಖಿಸಿದ್ದ ಸ್ಥಳೀಯ ನಿವಾಸಿ ಸತೀಶ್ ದೇವಾಡಿಗ ಹಾಗೂ ಬ್ಯಾನರ್ ಮುದ್ರಿಸಿದ ಕಾರ್ಕಳ ಮಾರ್ಕೆಟ್ ರಸ್ತೆಯಲ್ಲಿರುವ ಅಮೂಲ್ಯ ಗ್ರಾಫಿಕ್ಸ್‌ನ ಮಾಲಕಿ ಪುಷ್ಪಲತಾ ಎಂದು ಗುರುತಿಸಲಾಗಿದೆ.

ಮುಸ್ಲಿಮರ ಬಗ್ಗೆ ಅವಹೇಳನಕಾರಿ ಬರಹಗಳೊಂದಿಗೆ ಹಾಕಲಾದ ಬ್ಯಾನರ್ ಸೆ.2ರಂದು ಪ್ರತ್ಯಕ್ಷವಾಗಿದ್ದು, ಇದರಲ್ಲಿ ಸತೀಶ್ ದೇವಾಡಿಗ ತನ್ನ ಹೆಸರು ಹಾಗೂ ತಾನು ಸ್ವಾತಂತ್ರ್ಯ ಹೋರಾಟಗಾರ ಎಂಬುದಾಗಿ ಬರೆದುಕೊಂಡಿದ್ದನು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಸತೀಶ್ ದೇವಾಡಿಗ ಹಾಗೂ ಪುಷ್ಪಲತಾರನ್ನು ಬಂಧಿಸಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇವರ ಪೈಕಿ ಸತೀಶ್ ದೇವಾಡಿಗನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ್ದು, ಪುಷ್ಪಲತಾಳನ್ನು ಷರತ್ತು ಬದ್ಧ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago