ಕಾರ್ಕಳ,: ವ್ಯಕ್ತಿಯೊಬ್ಬರು ಸಾವಿಗೀಡಾದ ಬಳಿಕ ಅವರ ಹೆಸರಿನಲ್ಲಿ ಇದ್ಧ ಕೋಟ್ಯಾಂತರ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಶೇರುಗಳು ಮತ್ತು ಕೋಟ್ಯಾಂತರ ರೂಪಾಯಿ ನಗದನ್ನು ಆರೋಪಿಗಳಿಬ್ಬರು ತಮ್ಮ ಹೆಸರಿಗೆ ವರ್ಗಾಯಿಸಿರುವ ಕೃತ್ಯ ಬೆಳಕಿಗೆ ಬಂದಿದೆ.
ನಗರದ ಪುನೀತ್ ರಾವ್ ಈ ಕುರಿತು ನ್ಯಾಯಾಲಯಕ್ಕೆ ಮೊರೆ ಹೋಗಿದ್ದು, ನ್ಯಾಯಾಲಯದ ನಿರ್ದೇಶನದಂತೆ ಆರೋಪಿಗಳಾದ ಕಾರ್ಕಳ ಬಸ್ ನಿಲ್ದಾಣ ಬಳಿಯ ದಿನೇಶ್ ಕೆ(51), ಪೆರ್ವಾಜೆ ರಸ್ತೆಯ ಗುದ್ದೆಲ್ ಬಾಕ್ಯಾರ್ ನ ಪ್ರಸಾದ್(27) ಎಂಬವರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿರುತ್ತದೆ.
ಪ್ರಕರಣದ ದೂರುದಾರ ಪುನೀತ್ ರಾವ್ ರವರ ತಂದೆ ಅಶೋಕ್ ರಾವ್ ಅವರ ಹೆಸರಿನಲ್ಲಿ ಕಾರ್ಕಳ ನಗರದ ವಿವಿದೆಡೆಗಳಲ್ಲಿ ಸ್ಥಿರಾಸ್ತಿಗಳಿದ್ದು, ಅದರ ಮೌಲ್ಯವು ಕೋಟ್ಯಾಂತರ ರೂಪಾಯಿ ಆಗಿರುತ್ತದೆ. ಮಾತ್ರವಲ್ಲದೆರ ಬ್ಯಾಂಕ್ ಖಾತೆ ಹಾಗೂ ವಿವಿಧ ಶೇರು ಹೊಂದಿದ್ದರು. ತನ್ನ ಜೀವತಾವಧಿಯ ಕೊನೆಯ ದಿನಗಳಲ್ಲಿ ಅಶೋಕ ರಾವ್ ಒಂಟಿಯಾಗಿ ಬದುಕು ನಿರ್ವಹಿ, 2020 ಜೂಲೈ 13ರಂದು ಮೃತಪಟ್ಟಿದ್ದರು.
ಅವರು ತನ್ನ ಜೀವಿತಾವಧಿಯಲ್ಲಿ ಮೃತ್ಯು ಪತ್ರವನ್ನು ಬರೆದು ಒಟ್ಟಿರಲಿಲ್ಲ ಎಂದು ದೂರಿನಲ್ಲಿ ವಿವರಿಸಲಾಗಿದೆ. ಅಶೋಕ್ ರಾವ್ ಮೃತಪಟ್ಟ ಮಾಹಿತಿಯನ್ನು ಆರೋಪಿ ದಿನೇಶ್ ಕೆ ಮತ್ತು ಆತನ ಪತ್ನಿ ಮಂಜುಳಾ ಎಂಬುವರು ಪುನೀತ್ ರಾವ್ ಸಂಬಂಧಿಕರಿಗೆ ವಿಚಾರ ತಿಳಿಸಿದ್ದರು.
ವಿದೇಶದಲ್ಲಿ ಇದ್ದ ಪುನೀತ್ ರಾವ್ ಆತನ ತಾಯಿ ಮತ್ತು ಸಹೋದರ ಅವರು ಕೋವಿಡ್ ಲಾಕ್ ಡೌನ್ ಕಾರಣದಿಂದ ಊರಿಗೆ ಬರಲು ಸಾಧ್ಯವಾಗಿರಲಿಲ್ಲ. ಪುನೀತ್ ರಾವ್ ತಂದೆಯ ಹೆಸರಿನಲ್ಲಿ ರೂ. 4,24,90, 548.90 ಶೇರುಗಳನ್ನು ಮತ್ತು ಅವರ ಹೆಸರಿನಲ್ಲಿದ್ದ ಸ್ಥಿರಾಸ್ತಿ ರೂ.2,20,76,238.81 ಬ್ಯಾಂಕ್ ಡೆಪಾಸಿಟ್ ಗಳನ್ನು ಮೋಸದಿಂದ ಆರೋಪಿಗಳು ತಮ್ಮ ಹೆಸರಿಗೆ ವರ್ಗಾವಣೆ ಮಾಡಿದ್ದಾರೆಂದು ಮೃತ ಅಶೋಕ ರಾವ್ ಅವರ ಮಗ ಪುನೀತ್ ರಾವ್ ದೂರಿನಲ್ಲಿ ವಿವರಿಸಿದ್ದಾರೆ.
ಈ ಬಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿ ತನಿಖೆ ನಡೆಯುತ್ತಿದೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…