Featured

ಕಾರ್ಕಳ :  ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ : ಕಾರ್ಯಕರ್ತರಿಗೆ  ಸುನಿಲ್ ಕುಮಾರ್ ಕರೆ – vishwanews24

ಕಾರ್ಕಳ :  ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ : ಕಾರ್ಯಕರ್ತರಿಗೆ  ಸುನಿಲ್ ಕುಮಾರ್ ಕರೆ

ಕಾರ್ಕಳ : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ಉಡುಪಿ ಜಿಲ್ಲೆಯ ಕಾರ್ಕಳದ ಶಾಸಕರ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು.

ಈ ವೇಳೆ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಮಾತನಾಡಿ, ಡಾ ಧನಂಜಯ ಸರ್ಜಿಯವರು ವೈದ್ಯರಾಗಿ ಶಿವಮೊಗ್ಗದಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಕ್ರಿಯಾಶೀಲ ವ್ಯಕ್ತಿ. ಇನ್ನು ಶಿಕ್ಷಕರ ಕ್ಷೇತ್ರದಿಂದ ಎಸ್. ಎಲ್. ಭೋಜೇಗೌಡರು ಸ್ಪರ್ಧಿಸುತ್ತಿದ್ದಾರೆ, ಇಬ್ಬರು ಅಭ್ಯರ್ಥಿಗಳ ಗೆಲುವಿಗೆ ಪ್ರತಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈ ಭಾರಿ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೆತ್ರದಿಂದ ಎನ್ ಡಿ ಎ ಅಭ್ಯರ್ಥಿಯಾಗಿ ಎಸ್. ಎಲ್ ಭೋಜೇಗೌಡರು ಸ್ಪರ್ಧಿಸುತ್ತಿದ್ದಾರೆ. ಇವರ ಗೆಲುವಿಗೆ ವಾರ್ಡ್, ಬೂತ್ ಗಳಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಡಾ ಧನಂಜಯ ಸರ್ಜಿ , ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಬೋಜೆಗೌಡ, ವಿಭಾಗ ಪ್ರಭಾರಿಗಳಾದ ಉದಯ ಕೆಲ್ ಶೆಟ್ಟಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಯೋಗೀಶ್ , ದೇಶಪಾಲ ಶೆಟ್ಟಿ , ಮುನಿರಾಜ ಶೆಟ್ಟಿ , ಜಿಲ್ಲಾ ಕಾರ್ಯದರ್ಶಿಗಳಾದ ಉದಯ ಕಠಾರೆ , ಮಹಾವೀರ ಹೆಗಡೆ , ರೇಷ್ಮಾ ಉದಯ ಶೆಟ್ಟಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago