ಕಾರ್ಕಳ: ಮಿಯ್ಯಾರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಸುನಿಲ್ ಕುಮಾರ್ ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪ್ರಸಕ್ತ ವಿದ್ಯಮಾನ ಕುರಿತು ಪರಿಶೀಲನೆ ನಡೆಸಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕರಾದ ಮದರಸ ಎಸ್.ಮಕಾಂದರ, ಶಾಲೆಯ ವಿದ್ಯಾರ್ಥಿಗಳಿಗೆ ಬಸ್ಕಿ ಹೊಡೆಸುವುದು ಇತರ ದೈಹಿಕ ಶಿಕ್ಷೆಗಳನ್ನು ನೀಡುವುದು ಸೇರಿ.ದಂತೆ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಹಿನ್ನೆಲೆಯಲ್ಲಿ ಶಾಸಕರು ಶಾಲೆಗೆ ಭೇಟಿ ನೀಡಿ ಸಭೆ ನಡೆಸಿದರು.
ಮೊರಾರ್ಜಿ ವಸತಿ ಶಾಲೆಯು ಉತ್ತಮ ಹಾಗೂ ಗುಣ ಮಟ್ಟದ ಶಿಕ್ಷಣ ನೀಡುವಲ್ಲಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಇದೀಗ ಇಂತಹ ಶಿಕ್ಷಕರ ದುರ್ವರ್ತನೆಯಿಂದಾಗಿ ಶಾಲೆಯ ಉತ್ತಮ ವಾತವರಣ ಕೆಡಿಸಿದಂತಾಗಿದೆ. ಈ ರೀತಿಯ ಘಟನೆಗಳು ನಮ್ಮ ಕಾರ್ಕಳದಲ್ಲಿ ನಡೆದಿರುವುದು ಅತ್ಯಂತ ಖಂಡನೀಯ. ಇಂತಹ ಘಟನೆ ಸಮಾಜದ ನಡುವೆ ಒಡಕು ಸೃಷ್ಠಿಸಲು ಕುಮ್ಮಕ್ಕು ನೀಡಿದಂತಾಗುತ್ತದೆ. ಆದ ಕಾರಣ ಇಂತಹ ಶಿಕ್ಷಕರ ವಿರುದ್ದ ಸೂಕ್ತ ಶಿಕ್ಷೆ ಆಗುವಂತೆ ಹಾಗೂ ಈ ರೀತಿಯ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಗಮನ ಹರಿಸಬೇಕು ಎಂಬ ಶಾಸಕರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಕಳ ತಹಶೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು ಶಾಲೆಯ ಶಿಕ್ಷಕ ವರ್ಗ, ಅಧಿಕಾರಿಗಳು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…