Featured

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ

ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸ್ಥಾಪನೆಗೊಂಡಿದ್ದ ‘ಯಕ್ಷರಂಗಾಯಣʼ ಕೇಂದ್ರದ ಹೆಸರನ್ನು ರಾಜ್ಯ ಸರಕಾರವು ಏಕಾಏಕಿ ‘ಕರಾವಳಿ ರಂಗಾಯಣʼ ಎಂದು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವವಿಖ್ಯಾತ ಯಕ್ಷಗಾನ ಮತ್ತು ನಾಟಕರಂಗದ ಪರಂಪರೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಮಹತ್ತರ ದೂರದೃಷ್ಟಿಯೊಂದಿಗೆ ಕಾರ್ಕಳದಲ್ಲಿ ಯಕ್ಷರಂಗಾಯಣ ಸ್ಥಾಪನೆ ಮಾಡಲಾಗಿತ್ತು. ಹೆಸರು ಬದಲಿಸುವ ಈ ದಿಢೀರ್‌ ಮತ್ತು ದುರುದ್ದೇಶಪೂರಿತ ನಡೆ ಇಡೀ ಕರಾವಳಿಯ ಯಕ್ಷಗಾನ ಕಲೆಗೆ, ರಂಗಭೂಮಿಗೆ ಹಾಗೂ ಹಗಲಿರುಳು ಈ ಕಲೆಯನ್ನೇ ನಂಬಿ ಬದುಕುತ್ತಿರುವ ಸಾವಿರಾರು ಕಲಾವಿದರ ಸ್ವಾಭಿಮಾನಕ್ಕೆ ಮಾಡಿರುವ ಘೋರ ಅಪಮಾನವಾಗಿದೆ. ಇದು ಯಕ್ಷಗಾನ ಕಲೆಯ ಕತ್ತು ಹಿಸುಕುವ ರಾಜ್ಯ ಸರಕಾರದ ವ್ಯವಸ್ಥಿತ ಸಂಚು ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಸರಕಾರದ ಆಡಳಿತದಲ್ಲಿ ನಾನು ಕನ್ನಡ ಮತ್ತು ಸಂಸ್ಕ್ರತಿ ಸಚಿವನಾಗಿದ್ದಾಗ ಇಡೀ ಅವಿಭಜಿತ ಜಿಲ್ಲೆಯ ಅಸ್ಮಿತೆಯಾದ ಯಕ್ಷಗಾನ ಕಲೆಯನ್ನು ಯಕ್ಷಗಾನದ ಹೆಸರಲ್ಲೇ ಯುವ ಜನಾಂಗಕ್ಕೆ ಪರಿಚಯಿಸಬೇಕು ಆಶಯದಿಂದ ಆರಂಭಿಸಲಾಗಿತ್ತು. ಆ ಬಳಿಕ ಈ ಕೇಂದ್ರದಲ್ಲಿ ನಿರಂತರ ಯಕ್ಷಗಾನ, ನಾಟಕ ಕಲೆಗೆ ಸಂಬಂಧಿಸಿದ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಾ ಬಂದಿದ್ದು, ಯುವ ಸಮೂಹ ಯಕ್ಷಗಾನ, ನಾಟಕ ಕಲೆಯತ್ತ ಆಕರ್ಷಿತರಾಗಿದ್ದರು ಎಂದಿದ್ದರು.

ಯಕ್ಷ ರಂಗಾಯಣದ ಕಟ್ಟಡ ನಿರ್ಮಾಣ ಇತ್ಯಾದಿಗಳಿಗೆ ಸುಮಾರು 2 ಕೋಟಿ ರೂ ಹಣ ಮಂಜೂರಾಗಿ ಯಕ್ಷರಂಗಾಯಣ ಹೆಸರಲ್ಲಿ ಕಟ್ಟಡಗಳ ನಿರ್ಮಾಣವಾಗಿದೆ. ಆದರೆ, ಇವತ್ತು ಆ ಹೆಸರಿನಿಂದ ‘ಯಕ್ಷʼ ಎಂಬ ಪದವನ್ನೇ ಕಿತ್ತೊಗೆಯುವ ಮೂಲಕ ಸರಕಾರ ಯಾರ ಓಲೈಕೆಗೆ ನಿಂತಿದೆ? ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ‘ಯಕ್ಷಗಾನʼದ ಹೆಸರನ್ನು ಸಾಂಸ್ಕೃತಿಕ ಭೂಪಟದಿಂದಲೇ ಅಳಿಸಿ ಹಾಕಲು ಹೊರಟಿರುವ ಈ ಕೃತ್ಯದ ಹಿಂದೆ ಯಾರ ಕೈವಾಡವಿದೆ? ಕಲೆಯ ಹೆಸರನ್ನು ಬದಲಿಸಲು ಸರಕಾರಕ್ಕೆ ಒತ್ತಡ ಹೇರಿದ ಆ ಅದೃಶ್ಯ ಶಕ್ತಿಗಳು ಯಾವುವು ಎಂದು ಸುನಿಲ್‌ ಕುಮಾರ್ ಪ್ರಶ್ನಿಸಿದ್ದಾರೆ.

ಈ ಹಿಂದೆ ಬಿಜೆಪಿ ಅಧಿಕಾರ ಅವಧಿಯಲ್ಲಿ ನಾಡಿನ ಸಾಂಸ್ಕ್ರತಿಕ ಚಟುವಟಿಕೆಗಳಿಗೆ ಒತ್ತು ನೀಡಲಾಗಿತ್ತು. ಯಕ್ಷಗಾನ ಸಮಾವೇಶ, ಮೇಳ, ಹೀಗೆ ಹಲವು ವಿಧದ ಕಾರ್ಯಕ್ರಮ ಕೈಗೊಂಡು ಯಕ್ಷಗಾನ ಕಲಾವಿದರನ್ನು ಪ್ರೋತ್ಸಾಹಿಸಲಾಗಿತ್ತು. ಆದರೇ ಈ ಸರಕಾರ ಆಡಳಿತಕ್ಕೆ ಬಂದ ಬಳಿಕ ಕಲೆಗೆ ಒಂದಲ್ಲ ಒಂದು ರೀತಿ ದ್ರೋಹ ಬಗೆಯುವ ಪ್ರಯತ್ನ ನಡೆಸುತ್ತಿದೆ. ಯಕ್ಷಗಾನ ಕಲೆಯನ್ನು ಕೂಡ ಈ ಸರಕಾರಕ್ಕೆ ಸಹಿಸಲಾಗುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕರಾವಳಿ ರಂಗಾಯಣ ಎಂದು ಹೆಸರು ಬದಲಿಸುವ ನಿರ್ಧಾರಕ್ಕೆ ಮುನ್ನ ಕರಾವಳಿ ಭಾಗದವರ ಜನಪ್ರತಿನಿಧಿಗಳ ಜೊತೆ ಚರ್ಚಿಸದೇ, ಯಾರ ಗಮನಕ್ಕೂ ತಾರದೆ, ಸ್ಥಳಿಯರ ವಿಶ್ವಾಸ ಗಳಿಸದೆ ತರಾತುರಿಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದವರು ಆರೋಪಿಸಿದ್ದಾರೆ.

ಯಕ್ಷಗಾನ ಎಂಬುದು ಕೇವಲ ಒಂದು ಪ್ರದರ್ಶನ ಕಲೆಯಲ್ಲ. ಅದು ಕರಾವಳಿಯ ರಕ್ತಗತವಾಗಿ ಬಂದಿರುವ ಭಾವುಕ ಸಾಂಸ್ಕೃತಿಕ ಅಸ್ಮಿತೆ. ಇಂತಹ ಕಲೆಯ ಗೌರವಕ್ಕೆ ಧಕ್ಕೆ ತಂದಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರವು ತನ್ನ ಈ ಹಠಮಾರಿ ಮತ್ತು ವಿವೇಚನಾರಹಿತ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು. ರಾಜಕೀಯ ದುರುದ್ದೇಶಗಳನ್ನು ಬದಿಗಿಟ್ಟು, ಕೇಂದ್ರಕ್ಕೆ ‘ಯಕ್ಷರಂಗಾಯಣʼ ಎಂಬ ಮೂಲ ಹೆಸರನ್ನೇ ಉಳಿಸಬೇಕು. ಸರ್ಕಾರ ಒಂದು ವೇಳೆ ತನ್ನ ಪಟ್ಟನ್ನು ಸಡಿಲಿಸದೆ ಹೋದರೆ, ಅವಿಭಜಿತ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಸಮಸ್ತ ಯಕ್ಷಗಾನ ಅಭಿಮಾನಿಗಳ ಮೇಳಗಳ ಕಲಾವಿದರು ಹಾಗೂ ರಂಗದ ದಿಗ್ಗಜರ ತೀವ್ರ ವಿರೋಧವನ್ನು ಎದುರಿಸಬೇಕಾದಿತು ಎಂದು ಶಾಸಕ ಸುನಿಲ್‌ ಕುಮಾರ್‌ ಅವರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

20 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

20 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

22 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

22 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago