ಕಾರ್ಕಳ: ಅದಾನಿ ವಿದ್ಯುತ್ ಟವರ್ ನಿರ್ಮಾಣ ಕಾಮಗಾರಿ ವಿರುದ್ದ ಟವರ್ ನಿರ್ಮಾಣ ವಿರೋದಿ ಸಮಿತಿಯ ನೇತೃತ್ವದಲ್ಲಿ ಇನ್ನಾ ಗ್ರಾಮದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆಯ ಸ್ಥಳದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಸುದ್ದಿಗೋಷ್ಠಿ ಆಯೋಜಿಸಿದ್ದರು.
ಮುನಿಯಾಲು ಮುನಿಯಾಲು ಶೆಟ್ಟಿ ಮಾತನಾಡಿ ಯಾವುದೇ ಕಾರಣಕ್ಕೂ ಟವರ್ ನಿರ್ಮಾಣ ಯೋಜನೆಗೆ ಅವಕಾಶ ನೀಡುವುದಿಲ್ಲ. ಜನರಿಗೆ ತೊಂದರೆ ಉಂಟು ಮಾಡುತ್ತಿರುವ, ಕೃಷಿ ಭೂಮಿಗೆ ತೊಂದರೆಯುಂಟು ಮಾಡುತ್ತಿರುವ ಅವೈಜ್ಞಾನಿಕ ಯೋಜನೆಯ ಬದಲಾಗಿ ವೈಜ್ಞಾನಿಕ ರೀತಿಯಲ್ಲಿ ಭೂಗತ ಕೇಬಲ್,ಗಳ ಅಳವಡಿಕೆಯನ್ನು ಮಾಡಿದರೆ ಗ್ರಾಮದ ಕೃಷಿ ಭೂಮಿ ಉಳಿಯಲು ಸಾಧ್ಯವಿದೆ. ಹಾಗಾಗಿ ಕಂಪನಿಯು ವೈಜ್ಞಾನಿಕ ರೀತಿಯ ತಂತ್ರಜ್ಞಾನವನ್ನು ಕಾಮಗಾರಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಟವರ್ ನಿರ್ಮಾಣ ವಿರೋಧಿ ಸಮಿತಿಯ ಅಧ್ಯಕ್ಷ ಅಮರನಾಥ ಶೆಟ್ಟಿ ಮಾತನಾಡಿ ಟವರ್ ಅಳವಡಿಕೆ ಯೋಜನೆಯು ಗ್ರಾಮದಿಂದ ಒದ್ದೋಡಿಸುವ ತನಕ ವಿರಮಿಸುವುದಿಲ್ಲ. ಅವೈಜ್ಞಾನಿಕ ಕಾಮಾಗಾರಿಯ ಬದಲು ವೈಜ್ಞಾನಿಕ ಕ್ರಮಗಳನ್ನು ಅಳವಡಿಸುವಂತೆ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದರು.
ಹೋರಾಟಗಾರರಾದ ಕುಶ.ಆರ್.ಮೂಲ್ಯ, ಜಯ ಕೋಟ್ಯಾನ್ ಇನ್ನಾ, ದೀಪಕ್ ಕೋಟ್ಯಾನ್, ಅನಿತಾ ಡಿಸೋಜ, ಪ್ರವೀಣ್ .ಜೆ. ಶೆಟ್ಟಿ, ಸುಲೋಚನ ಕೋಟ್ಯಾನ್, ದಿವಾಕರ ಶೆಟ್ಟಿ, ರವಿ ಶೆಟ್ಟಿ ಇನ್ನಾ, ಸುರೇಶ್ ಶೆಟ್ಟಿ ಅಬ್ಬಗ ದಾರಗ, ಕಸ್ತೂರಿ ಆಚಾರ್ಯ, ಸುರೇಶ್ ಮೂಲ್ಯ, ಅಜಿತ್ ಶೆಟ್ಟಿ ಸೂಡಾ, ಶೇಖ್ ಅಬ್ದುಲ್, ಶೋಭಾ, ಯೋಗೀಶ್ ಇನ್ನಾ, ಸಂತೋಷ್ ದೇವಾಡಿಗ, ಕಿಶೋರ್ ದೀಕ್ಷಿತ್ ದೇವಾಡಿಗ, ಪ್ರದೀಪ್ ಬೇಲಾಡಿ, ಸುದರ್ಶನ್ ಬಂಗೇರ, ಮನೀಶ್ ಪೂಜಾರಿ, ಅನೀಶ್ ಪೂಜಾರಿ, ಪ್ರಶಾಂತ್ ಕುಂದರ್, ಕೇಶವ ಸಾಲಿಯಾನ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…