ಕಾರ್ಕಳ: ಅದಾನಿ ವಿದ್ಯುತ್ ಟವರ್ ನಿರ್ಮಾಣ ಕಾಮಗಾರಿ ವಿರುದ್ದ ಟವರ್ ನಿರ್ಮಾಣ ವಿರೋದಿ ಸಮಿತಿಯ ನೇತೃತ್ವದಲ್ಲಿ ಇನ್ನಾ ಗ್ರಾಮದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆಯ ಸ್ಥಳದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಸುದ್ದಿಗೋಷ್ಠಿ ಆಯೋಜಿಸಿದ್ದರು.
ಮುನಿಯಾಲು ಮುನಿಯಾಲು ಶೆಟ್ಟಿ ಮಾತನಾಡಿ ಯಾವುದೇ ಕಾರಣಕ್ಕೂ ಟವರ್ ನಿರ್ಮಾಣ ಯೋಜನೆಗೆ ಅವಕಾಶ ನೀಡುವುದಿಲ್ಲ. ಜನರಿಗೆ ತೊಂದರೆ ಉಂಟು ಮಾಡುತ್ತಿರುವ, ಕೃಷಿ ಭೂಮಿಗೆ ತೊಂದರೆಯುಂಟು ಮಾಡುತ್ತಿರುವ ಅವೈಜ್ಞಾನಿಕ ಯೋಜನೆಯ ಬದಲಾಗಿ ವೈಜ್ಞಾನಿಕ ರೀತಿಯಲ್ಲಿ ಭೂಗತ ಕೇಬಲ್,ಗಳ ಅಳವಡಿಕೆಯನ್ನು ಮಾಡಿದರೆ ಗ್ರಾಮದ ಕೃಷಿ ಭೂಮಿ ಉಳಿಯಲು ಸಾಧ್ಯವಿದೆ. ಹಾಗಾಗಿ ಕಂಪನಿಯು ವೈಜ್ಞಾನಿಕ ರೀತಿಯ ತಂತ್ರಜ್ಞಾನವನ್ನು ಕಾಮಗಾರಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಟವರ್ ನಿರ್ಮಾಣ ವಿರೋಧಿ ಸಮಿತಿಯ ಅಧ್ಯಕ್ಷ ಅಮರನಾಥ ಶೆಟ್ಟಿ ಮಾತನಾಡಿ ಟವರ್ ಅಳವಡಿಕೆ ಯೋಜನೆಯು ಗ್ರಾಮದಿಂದ ಒದ್ದೋಡಿಸುವ ತನಕ ವಿರಮಿಸುವುದಿಲ್ಲ. ಅವೈಜ್ಞಾನಿಕ ಕಾಮಾಗಾರಿಯ ಬದಲು ವೈಜ್ಞಾನಿಕ ಕ್ರಮಗಳನ್ನು ಅಳವಡಿಸುವಂತೆ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದರು.
ಹೋರಾಟಗಾರರಾದ ಕುಶ.ಆರ್.ಮೂಲ್ಯ, ಜಯ ಕೋಟ್ಯಾನ್ ಇನ್ನಾ, ದೀಪಕ್ ಕೋಟ್ಯಾನ್, ಅನಿತಾ ಡಿಸೋಜ, ಪ್ರವೀಣ್ .ಜೆ. ಶೆಟ್ಟಿ, ಸುಲೋಚನ ಕೋಟ್ಯಾನ್, ದಿವಾಕರ ಶೆಟ್ಟಿ, ರವಿ ಶೆಟ್ಟಿ ಇನ್ನಾ, ಸುರೇಶ್ ಶೆಟ್ಟಿ ಅಬ್ಬಗ ದಾರಗ, ಕಸ್ತೂರಿ ಆಚಾರ್ಯ, ಸುರೇಶ್ ಮೂಲ್ಯ, ಅಜಿತ್ ಶೆಟ್ಟಿ ಸೂಡಾ, ಶೇಖ್ ಅಬ್ದುಲ್, ಶೋಭಾ, ಯೋಗೀಶ್ ಇನ್ನಾ, ಸಂತೋಷ್ ದೇವಾಡಿಗ, ಕಿಶೋರ್ ದೀಕ್ಷಿತ್ ದೇವಾಡಿಗ, ಪ್ರದೀಪ್ ಬೇಲಾಡಿ, ಸುದರ್ಶನ್ ಬಂಗೇರ, ಮನೀಶ್ ಪೂಜಾರಿ, ಅನೀಶ್ ಪೂಜಾರಿ, ಪ್ರಶಾಂತ್ ಕುಂದರ್, ಕೇಶವ ಸಾಲಿಯಾನ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…