ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ.
ಪ್ರಕರಣದ ಆರೋಪಿಗಳಾದ ಅಲ್ತಾಫ್ ಹಾಗೂ ಸುಧೀರ ಎಂಬಾತನನ್ನು ಬಂಧಿಸಲಾಗಿದ್ದು ಇವರು ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ
ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್ ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯವಾಗಿದ್ದು ಅಲ್ತಾಫ್ ಶುಕ್ರವಾರ ಸಂತ್ರಸ್ತರಿಗೆ ಕರೆ ಮಾಡಿ ಒಂದು ಕಡೆಗೆ ಬರಲು ತಿಳಿಸಿದ್ದನು. ಅದರಂತೆ ಅಲ್ಲಿಗೆ ಹೋದ ಸಂತ್ರಸ್ತೆಯನ್ನು ಆರೋಪಿ ಅಪಹರಿಸಿ ಕೊಂಡು ಹೋಗಿರುವುದಾಗಿ ದೂರಲಾಗಿದೆ.
ಅಲ್ಲಿ ಅಲ್ತಾಫ್ ಡ್ರಿಂಕ್ಸ್ ನಲ್ಲಿ ಮತ್ತು ಬರಿಸುವ ಪದಾರ್ಥವನ್ನು ಬೆರೆಸಿ ಕೊಟ್ಟಿದ್ದು ಆ ಸಂದರ್ಭದಲ್ಲಿ ಆತ ತನ್ನ ಮೇಲೆ ಅತ್ಯಾಚಾರಿ ಎಸಗಿರುವುದಾಗಿ ಸಂತ್ರಸ್ತ ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಆರೋಪಿ ಅಲ್ತಾಫ್ ಹಾಗೂ ಡ್ರಿಂಕ್ಸ್ ಅನ್ನು ತಂದುಕೊಟ್ಟ ಸುಧೀರ್ ನನ್ನು ಬಂಧಿಸಿ, ಅವರಿಬ್ಬರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೃತ್ಯ ಎಸಗಿದ ಬಳಿಕ ಆರೋಪಿ ಅಲ್ತಾಫ್ ಆತನ ಕಾರಿನಲ್ಲಿ ಸಂತ್ರಸ್ತ ಯುವತಿಯನ್ನು ಆಕೆಯ ಮನೆ ಬಳಿ ಬಿಟ್ಟು ಹೋಗಿದ್ದಾನೆ. ತೀವ್ರವಾಗಿ ಅಸ್ವಸ್ಥಗೊಂಡಿರುವ ಯುವತಿಯನ್ನು ಕಾರ್ಕಳ ಆಸ್ಪತ್ರೆಯಿಂದ ಮಣಿಪಾಲ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಈ ಪ್ರಕರಣದ ಕಾನೂನು ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಅವರು ತಿಳಿಸಿದ್ದಾರೆ
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…