ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ.
ಪ್ರಕರಣದ ಆರೋಪಿಗಳಾದ ಅಲ್ತಾಫ್ ಹಾಗೂ ಸುಧೀರ ಎಂಬಾತನನ್ನು ಬಂಧಿಸಲಾಗಿದ್ದು ಇವರು ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ
ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್ ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯವಾಗಿದ್ದು ಅಲ್ತಾಫ್ ಶುಕ್ರವಾರ ಸಂತ್ರಸ್ತರಿಗೆ ಕರೆ ಮಾಡಿ ಒಂದು ಕಡೆಗೆ ಬರಲು ತಿಳಿಸಿದ್ದನು. ಅದರಂತೆ ಅಲ್ಲಿಗೆ ಹೋದ ಸಂತ್ರಸ್ತೆಯನ್ನು ಆರೋಪಿ ಅಪಹರಿಸಿ ಕೊಂಡು ಹೋಗಿರುವುದಾಗಿ ದೂರಲಾಗಿದೆ.
ಅಲ್ಲಿ ಅಲ್ತಾಫ್ ಡ್ರಿಂಕ್ಸ್ ನಲ್ಲಿ ಮತ್ತು ಬರಿಸುವ ಪದಾರ್ಥವನ್ನು ಬೆರೆಸಿ ಕೊಟ್ಟಿದ್ದು ಆ ಸಂದರ್ಭದಲ್ಲಿ ಆತ ತನ್ನ ಮೇಲೆ ಅತ್ಯಾಚಾರಿ ಎಸಗಿರುವುದಾಗಿ ಸಂತ್ರಸ್ತ ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಆರೋಪಿ ಅಲ್ತಾಫ್ ಹಾಗೂ ಡ್ರಿಂಕ್ಸ್ ಅನ್ನು ತಂದುಕೊಟ್ಟ ಸುಧೀರ್ ನನ್ನು ಬಂಧಿಸಿ, ಅವರಿಬ್ಬರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೃತ್ಯ ಎಸಗಿದ ಬಳಿಕ ಆರೋಪಿ ಅಲ್ತಾಫ್ ಆತನ ಕಾರಿನಲ್ಲಿ ಸಂತ್ರಸ್ತ ಯುವತಿಯನ್ನು ಆಕೆಯ ಮನೆ ಬಳಿ ಬಿಟ್ಟು ಹೋಗಿದ್ದಾನೆ. ತೀವ್ರವಾಗಿ ಅಸ್ವಸ್ಥಗೊಂಡಿರುವ ಯುವತಿಯನ್ನು ಕಾರ್ಕಳ ಆಸ್ಪತ್ರೆಯಿಂದ ಮಣಿಪಾಲ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಈ ಪ್ರಕರಣದ ಕಾನೂನು ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಅವರು ತಿಳಿಸಿದ್ದಾರೆ
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…