ಕಾರ್ಕಳ: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಯುವತಿಯನ್ನು ಪುಸಲಾಯಿಸಿ ಕರೆದೊಯ್ದ ಯುವಕ, ಆಕೆಗೆ ಅಮಲು ಪದಾರ್ಥ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಲಾಗಿದೆ. ಆಕೆಯ ಮೇಲೆ ಮೂವರು ದೌರ್ಜನ್ಯ ಎಸಗಿದ್ದಾರೆ ಎನ್ನಲಾಗುತ್ತಿದ್ದು ತನಿಖೆಯಿಂದ ನಿಜ ಪರಿಸ್ಥಿತಿ ತಿಳಿದು ಬರಬೇಕಿದೆ. ತೀವ್ರ ಅಸ್ವಸ್ಥಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಜರಂಗದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್. ಅವರು ಘಟನೆಯನ್ನು ಖಂಡಿಸಿದ್ದು ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದಲ್ಲಿ ಠಾಣೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಕಾರ್ಕಳ ಜೋಡುರಸ್ತೆ ನಿವಾಸಿ ಅಲ್ತಾಫ್ ಎಂಬಾತನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶ್ರಮ ಜೀವಿ ಸಮಾಜ ಭೋವಿ ಸಮುದಾಯದ ಬಡ ಯುವತಿಯೋರ್ವಳಿಗೆ ಮತ್ತು ಭರಿಸುವಂತ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ಅತ್ಯಂತ ಖಂಡನೀಯ. ಇದೊಂದು ಪೈಶಾಚಿಕ ಕೃತ್ಯ ಎಂದು ಘಟನೆಯನ್ನು ಮಾಜಿ ಸಚಿವ, ಶಾಸಕ ವಿ ಸುನಿಲ್ ಕುಮಾರ್ ಕಟು ಶಬ್ದಗಳಿಂದ ಟೀಕಿಸಿದ್ದಾರೆ. ಯುವತಿಯನ್ನು ಪುಸಲಾಯಿಸಿ ಅಮಲು ಪದಾರ್ಥದೊಂದಿಗೆ ಕಾರಿನಲ್ಲಿ ಸುಮಾರು ದೂರ ಪಳ್ಳಿ ತನಕ ಕರೆದೊಯ್ದು ಅಮಲು ಪದಾರ್ಥ ನೀಡಿ ಈ ಕೃತ್ಯ ನಡೆಸಿದ್ದಾರೆ ಎಂದರೆ ಇದನ್ನು ಊಹಿಸಲು ಅಸಾದ್ಯ. ಇದೊಂದು ಪೂರ್ವಯೋಜಿತ ಕೃತ್ಯ ಎನ್ನುವ ಸಂದೇಹ ದಟ್ಟವಾಗಿ ಕಾಣುತ್ತದೆ. ಪ್ರಕರಣ ಸಂಬಂಧ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಬೇಕು. ಈ ಮೂಲಕ ಪ್ರಕರಣ ಹಿಂದಿರುವ ಶಕ್ತಿಗಳನ್ನು ಪತ್ತೆ ಹಚ್ಚಿ ಬೇಧಿಸಬೇಕು. ಈ ಹಿಂದೆಯೂ ಇಂತಹ ಕೃತ್ಯ ಎಸಗಿರುವ ಸಾಧ್ಯತೆ ದೃಷ್ಟಿಯಿಂದಲೂ ಸೂಕ್ತ ತನಿಖೆಯಾಗಬೇಕು. ಸಂತ್ರಸ್ಥ ಯುವತಿಯ ಆರೋಗ್ಯ ವೆಚ್ಚವನ್ನು ಸರಕಾರ ಭರಿಸಬೇಕು. ಜಿಲ್ಲಾಡಳಿತ ಯುವತಿಗೆ ಮಾನಸಿಕ ಧೈರ್ಯ ತುಂಬಿ, ಯುವತಿ ಮತ್ತು ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದವರು ಆಗ್ರಹಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…