Featured

ಕಾರ್ಕಳ: ರಾಜ್ಯದ ಹಿಂದು ಪರ ಸಂಘಟನಾ ಕಾರ್ಯಕರ್ತರು ಕಾರ್ಕಳಕ್ಕೆ ಮುತ್ತಿಗೆ ಹಾಕುವ ಪರಿಸ್ಥಿತಿ ಎದುರು ಹಾಕದಿರಿ : ಸರ್ಕಾರಕ್ಕೆ ಶ್ರೀರಾಮಸೇನೆ ಎಚ್ಚರಿಕೆ – Vishwanews24

ಕಾರ್ಕಳ: ರಾಜ್ಯದ ಹಿಂದು ಕಾರ್ಯಕರ್ತರು ಕಾರ್ಕಳಕ್ಕೆ ಮುತ್ತಿಗೆ ಹಾಕುವ ಪರಿಸ್ಥಿತಿ ಎದುರು ಹಾಕದಿರಿ

ಶ್ರೀರಾಮಸೇನಾ ಕಾರ್ಯಕರ್ತರ ತಂಟೆಗೆ ಬಂದರೆ ತಕ್ಕಶಾಸ್ತಿ-ಸರ್ಕಾರಕ್ಕೆ ಗಂಗಾಧರ್ ಕುಲಕರ್ಣಿ ಎಚ್ಚರಿಕೆ

ಕಾರ್ಕಳ: ಶ್ರೀರಾಮಸೇನಾ ಕಾರ್ಯಕರ್ತರ ವಿರುದ್ಧ ವಿನಾಕಾರಣ ಉಪಟಳ ನೀಡಿ ಕಾನೂನು ಕುಣಿಕೆಗೆ ಸಿಲುಕಿಸುವ ಪ್ರಯತ್ನಗಳು ಮುಂದುವರಿಸಿದ್ದಲ್ಲಿ ತಕ್ಕಶಾಸ್ತಿಯನ್ನು ಎದುರಿಸಬೇಕಾದೀತು. ಇಡೀ ರಾಜ್ಯದ ಹಿಂದು ಪರ ಸಂಘಟನಾ ಕಾರ್ಯಕರ್ತರು ಕಾರ್ಕಳಕ್ಕೆ ಮುತ್ತಿಗೆ ಹಾಕುವ ಪರಿಸ್ಥಿತಿ ಎದುರು ಹಾಕದಿರಿ ಎಂದು ಬಿಜೆಪಿ ರಾಜ್ಯ ಘಟಕ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರಕ್ಕೆ ಶ್ರೀ ರಾಮಸೇನೆಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ಎಚ್ಚರಿಸಿದ್ದಾರೆ.

ಕಾರ್ಕಳ ವಿಸ್ತೃತ ಬಸ್ ನಿಲ್ದಾಣ ಪರಿಸರದಲ್ಲಿ ಮಂಗಳವಾರ ಸಂಜೆ ಆಯೋಜಿಸಿದ ಬೃಹತ್ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 2004ರ ವಿಧಾನ ಸಭಾ ಚುನಾವಣೆಯಲ್ಲಿ ಇದೇ ಕಾರಣದಿಂದ ಹಿಂದುತ್ವ ಸಂಘಟನೆಯ ಪ್ರಮುಖರೊಬ್ಬರು ಆಯ್ಕೆಯಾಗಿದ್ದರು. ಅವರನ್ನು ವಿಧಾನ ಸಭೆಗೆ ಕಳುಹಿಸುವಲ್ಲಿ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರ ಪರಿಶ್ರಮವೇ ಪ್ರಮುಖ ಕಾರಣವಾಗಿತ್ತು. ಹಿಂದುತ್ವದ ಅಜೆಂಡಾವನ್ನೇ ಮೂಲೆಗುಂಪಾಗಿ ಮಾಡಿರುವ ಆ ವ್ಯಕ್ತಿಯನ್ನು ಸೋಲಿಸುವ ಮೂಲ ಉದ್ದೇಶದಿಂದಲೇ ಮತ್ತೆ ಪ್ರಮೋದ್ ಮುತಾಲಿಕ್ ಕಾರ್ಕಳಕ್ಕೆ ಬಂದಿದ್ದಾರೆ. ಸಂಘಟನೆಯಲ್ಲಿ ಇದ್ದಾಗ ಅವರಲ್ಲಿ ಹಿಂದುತ್ವದ ತತ್ವ-ಸಿದ್ಧಾಂತಗಳು ಮರೆಯಾಗಿದೆ. ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗೋ ಹತ್ಯೆ, ಮತಾಂತರ, ಲವ್ ಜಿಹಾದ್ ಪ್ರಕರಣಗಳು ಎಲ್ಲೇ ಮೀರಿದೆ. ಅದನ್ನೆಲ್ಲ ಕಡಿವಾಣ ಹಾಕುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಹಲವು ಆರೋಪಗಳು, ಭ್ರಷ್ಟಾಚಾರಗಳು ಇವರ ಮೇಲಿದೆ. ಪೂರಕ ದಾಖಲೆಗಳು ಚುನಾವಣಾ ಸಂದರ್ಭದಲ್ಲಿ ಬಹಿರಂಗಪಡಿಸುವುದಾಗಿ ಶಪಥಗೈದಿದ್ದಾರೆ. ನಾವು ಮಾಡುತ್ತಿರುವ ಆರೋಪಗಳಿಗೆ ಉತ್ತರಿಸುವ ಧೈರ್ಯ ತೋರದ ಜನಪ್ರತಿನಿಧಿಯೂ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರೊಂದಿಗಿದ್ದ ಕಾರ್ಯಕರ್ತರು ಹಾಗೂ ಮುಖಂಡರ ವಿರುದ್ಧ ಹಗೆತನಕ್ಕೆ ಮುಂದಾಗುತ್ತಿರುವುದು ಹತಾಶತನವೆದಂದು ಲೇವಡಿ ಮಾಡಿದರು.

ಹಿಂದುತ್ವದಿಂದಲೇ ನೀವು ರಾಜ್ಯದ ಪ್ರಮುಖ ಹುದ್ದೆಯನ್ನು ಅಲಂಕರಿಸಿದ್ದೀರಿ ಎಂಬುವುದನ್ನು ಮರೆಯದಿರಿ. ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಎಸೆಯುವ ಪ್ರಯತ್ನ ಮಾಡದಿರಿ. ಶ್ರೀರಾಮ ಸೇನಾ ಕಾರ್ಯಕರ್ತರು ಹಿಂದುತ್ವಕ್ಕಾಗಿ ಹಲವು ಕೇಸುಗಳನ್ನು ಎದುರಿಸುತ್ತಿದ್ದಾರೆ. ನಮಗೆ ಯಾವುದೇ ಪಕ್ಷ ಮುಖ್ಯವಲ್ಲ. ಹಿಂದುತ್ವ, ದೇಶ, ಭ್ರಷ್ಟಾಚಾರ ರಹಿತ ಆಡಳಿತ ಮುಖ್ಯ ಎಂದರು.

ಶ್ರೀರಾಮ ಸೇನೆಯ ರಾಜ್ಯ ಕಾರ್ಯದರ್ಶಿ ಆನಂದ ಅಡ್ಯಾರು, ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ವಕೀಲ ಹರೀಶ್ ಅಧಿಕಾರಿ, ಕಾರ್ಕಳ ಪುರಸಭಾ ಸದಸ್ಯ ಲಕ್ಷ್ಮೀನಾರಾಯಣ ಮಲ್ಯ, ಪ್ರವೀಣ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

12 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago