ಉಡುಪಿ: ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಚಿಹ್ನೆಗಳಾದ ಜನಿವಾರ ಮತ್ತು ಕೈದಾರ(ರಕ್ಷಾಸೂತ್ರ)ಗಳನ್ನು ಬಲವಂತವಾಗಿ ತೆಗೆಸಿ ದೈಹಿಕ ಶಿಕ್ಷೆಗೆ ಒಳಪಡಿಸಿದ್ದಾರೆಯೆಂಬ ಗಂಭೀರ ಆರೋಪ ದೈಹಿಕ ಶಿಕ್ಷಣ ಶಿಕ್ಷಕ ಮದರಶಾ ಎಸ್. ಮಕಾಂದರ್ ವಿರುದ್ಧ ಕೇಳಿಬಂದಿದೆ. ಪೋಷಕರು ಹಾಗೂ ಗ್ರಾಮಸ್ಥರ ಆಕ್ರೋಶದ ನಡುವೆ, ಶಾಲಾ ಪ್ರಾಂಶುಪಾಲರು ಸಂಬಂಧಿತ ಶಿಕ್ಷಕರನ್ನು ಕರ್ತವ್ಯದಿಂದ ವಜಾಗೊಳಿಸಿರುವುದು ತಿಳಿದುಬಂದಿದೆ.
ಹಿಂದೂ ಜನಜಾಗೃತಿ ಸಮಿತಿಯು ಈ ಕೃತ್ಯವನ್ನು ಮಕ್ಕಳ ಹಕ್ಕುಗಳ ಸಂರಕ್ಷಣಾ ಅಧಿನಿಯಮಗಳ ಉಲ್ಲಂಘನೆ ಎಂದು ಗುರುತಿಸಿ, ತಕ್ಷಣ FIR ದಾಖಲಿಸಿ ಬಂಧನ ಕ್ರಮ ಕೈಗೊಳ್ಳುವಂತೆ ತಾಲೂಕು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಅಧಿಕಾರಿಗಳು ತಕ್ಷಣ ಗಂಭೀರ ಕ್ರಮ ಕೈಗೊಳ್ಳಬೇಕೆಂದು ಸಮಿತಿಯು ಆಗ್ರಹಿಸಿದೆ. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಹಾಗೂ ಅನೇಕ ಧರ್ಮ ಪ್ರೇಮಿಗಳು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಕ್ತಾರರಾದ ಬಾಲಕೃಷ್ಣ ನಾಯಕ್ ಮಾತನಾಡಿ, ಮಕ್ಕಳ ಧಾರ್ಮಿಕ ಸಂವೇದನೆ, ನಂಬಿಕೆ, ಸಂಸ್ಕಾರಗಳಿಗೆ ಧಕ್ಕೆ ತರುವ ಈ ರೀತಿಯ ವರ್ತನೆ ಅತ್ಯಂತ ಕ್ರೂರವಾಗಿದೆ ಹಾಗೂ ಇದು ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ಈ ಶಿಕ್ಷಕನ ಮೇಲೆ ತಕ್ಷಣ ಕಾನೂನು ಕ್ರಮ ಕೈಗೊಂಡು ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಬೇಕಾಗಿ ಸಮಿತಿಯು ಒತ್ತಿ ಹೇಳಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…