ಕಾರ್ಕಳ: ಕಾಲೇಜಿಗೆ ಬಿಡುತ್ತೇನೆಂದು ನಂಬಿಸಿ ವಿದ್ಯಾರ್ಥಿನಿಯೊಬ್ಬಳನ್ನು ಕಾರಿನಲ್ಲಿ ಕುಳಿರಿಸಿ ಅಮಲು ಭರಿತ ಜ್ಯೂಸ್ ಕುಡಿಸಿ ನೇರವಾಗಿ ಉಪ್ಪಿನಂಗಡಿ ಬಂದಾರು ಮನೆಯೊಂದರಲ್ಲಿ ಕೂಡಿ ಹಾಕಿ ಅತ್ಯಾಚಾರಗೈದು ಬ್ಲಾಕ್ಮೇಲ್ ಮಾಡಿ ಆಕೆಯ ಜೀವದೊಂದಿಗೆ ನಿರಂತರವಾಗಿ ಚೆಲ್ಲಾಟ ನಡೆಸುತ್ತಿದ್ದ ಆರೋಪಿ ಉಪ್ಪಿನಂಗಡಿಯ ಪ್ರಾಣೇಶ್(38) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಂಗಡಿ ಬಂದಾರಿನ ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ವೆಸಗಿದ ಆರೋಪಿ ಪ್ರಾಣೇಶ್ ಆಕೆಗೆ ಬೆದರಿಕೆಯೊಡ್ಡಿ ನಿನ್ನ ನಗ್ನ ಚಿತ್ರಗಳು ಸೆರೆ ಹಿಡಿದಿದ್ದೇನೆ. ಯಾರಿಗಾದರೂ ವಿಚಾರ ತಿಳಿಸಿದರೆ ಅದನ್ನು ಬಿಡುಗಡೆ ಮಾಡುವುದಾಗಿ ಬ್ಲಾಕ್ಮೇಲ್ ಮಾಡಿದ್ದಾನೆ. ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಳು.
ಮಾನಕ್ಕೆ ಅಂಜಿದ ಯುವತಿ ಆತನ ಕೃತ್ಯವನ್ನು ಇತರರಿಗೆ ತಿಳಿಸದೇ ಮೌನಕ್ಕೆ ಶರಣಾಗಿದ್ದಳು. ಅದನ್ನೇ ಬಂಡವಾಳವನ್ನಾಗಿ ಮಾಡಿದ ಆರೋಪಿ ಪ್ರಾಣೇಶ್ ವಿದ್ಯಾರ್ಥಿನಿಗೆ ಅಗ್ಗಿಂದಾಗೆ ಕರೆ ಮಾಡಿ ಕರೆದಲ್ಲಿಗೆ ಬಾರದೇ ಹೋದಲ್ಲಿ ವಿಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆಯೊಡ್ಡುತ್ತಿದ್ದನು ಎನ್ನಲಾಗಿದೆ.
ಅಲ್ಲದೆ ಜನವರಿ 12 ರಂದು ಯುವತಿ ಕಾರ್ಕಳಕ್ಕೆ ಕಂಪ್ಯೂಟರ್ ಕ್ಲಾಸಿಗೆ ಬಂದ ಸಮಯ ಬೈಲೂರಿಗೆ ಬರುವಂತೆ ಬೆದರಿಸಿದ್ದು, ಹೆದರಿಕೆಯಿಂದ ಬೈಲೂರಿಗೆ ಹೋದಾಗ ಅಲ್ಲಿಗೆ ಬಂದ ಪ್ರಾಣೇಶ್ ಆಕೆಯನ್ನು ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿಕೊಂಡು ಗುಡ್ಡೆಯಂಗಡಿ ಬಳಿ ಆತನು ಕೆಲಸ ಮಾಡುತ್ತಿರುವ ಮ್ಹಾಲಿಕರ ಮನೆಗೆ ಕರೆದುಕೊಂಡು ಅತ್ಯಾಚಾರ ನಡೆಸಿರುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಳು.
ಯುವತಿಯ ದೂರನ್ನು ಸ್ವೀಕರಿಸಿ ಪ್ರಕರಣ ದಾಖಲಿಸಿದ್ದ ಕಾರ್ಕಳ ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…