ಜಿಲ್ಲೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶ ; ಬಿಜೆಪಿ ಗೆಲ್ಲಿಸಲು ಕಾರ್ಯಕರ್ತರು ಕಟಿಬದ್ಧರಾಗಿ: ನಳಿನ್‌ ಕುಮಾರ್‌ ಕಟೀಲ್‌

ಕಾರ್ಕಳ: ವಿರೋಧ ಪಕ್ಷದ ಶಾಸಕರಾಗಿದ್ದರೂ ಕಾರ್ಕಳ ಕ್ಷೇತ್ರದಲ್ಲಿ ರಾಜ್ಯದ ಬೇರೆ ಎಲ್ಲ  ಕ್ಷೇತ್ರಗಳಿಗೆ ಮಾದರಿಯಾಗುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿಯೂ ಸುನಿಲ್‌ ಕುಮಾರ್‌ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಕಟಿಬದ್ಧರಾಗಬೇಕು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಮಂಜುನಾಥ ಪೈ ಸಭಾಭವನದಲ್ಲಿ ಚುನಾವಣಾ ಪೂರ್ವಭಾವಿಯಾಗಿ ನಡೆದ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಧಾನ ಪರಿಷತ್‌ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಮಾತನಾಡಿ, ಸರಕಾರದ ಯೋಜನೆಗಳು, ಅಭಿವೃದ್ಧಿ, ಜನರ ಸಮಸ್ಯೆ, ಭವಿಷ್ಯದ ಚಿಂತನೆ ಇವೆಲ್ಲ ಇಲ್ಲದೇ ಶಾಸಕ ಯಶಸ್ವಿಯಾಗಲು ಸಾಧ್ಯವಿಲ್ಲ. ಆದರೆ ಸುನಿಲ್‌ ಕುಮಾರ್‌ ಅವರು ಅದೆಲ್ಲವನ್ನೂ ಮೈಗೂಡಿಸಿಕೊಂಡಿದ್ದಾರೆ ಎಂದರು.

ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಕಾರ್ಯಕರ್ತರು ಶ್ರಮ ಪಡಬೇಕಾಗಿದೆ. ಬಹು ಸಂಖ್ಯಾತರಿಗಾಗುವ ಸಮಸ್ಯೆ, ಲವ್‌ ಜಿಹಾದ್‌ ವಿರುದ್ಧ ಹೋರಾಟ, ಗೋಸಂಕ್ಷಣೆ, ರಾಷ್ಟ್ರಭಕ್ತಿ ಪ್ರತಿಯೊಬ್ಬರ ಧ್ಯೇಯವಾಗಬೇಕು. ಅಂತಹಾ ಧ್ಯೇಯವುಳ್ಳ ಶಾಸಕರನ್ನು ನಾವು ಬೆಂಬಲಿಸಬೇಕು ಎಂದರು.

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮುಂಬಯಿಯ ಉದ್ಯಮಿ ಮಹೇಶ್‌ ಶೆಟ್ಟಿ ಅವರ ಹೆಸರನ್ನು ಘೋಷಿಸಲಾಯಿತು.ಸಮಾವೇಶದಲ್ಲಿ ಶುಕ್ರವಾರ ನಿಧನ ಹೊಂದಿದ ಪುರಸಭೆಯ ಮಾಜಿ ಸದಸ್ಯೆ ರತ್ನಾ ಯು. ಪೈ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಕ್ಷೇತ್ರಾಧ್ಯಕ್ಷ ಮಣಿರಾಜ್‌ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೋಳ ಪ್ರಭಾಕರ ಕಾಮತ್‌ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಹಾಲಿ ಶಾಸಕ ವಿ. ಸುನಿಲ್‌ ಕುಮಾರ್‌, ಎಂ.ಕೆ. ವಿಜಯ ಕುಮಾರ್‌, ಗುರುಪ್ರಸಾದ್‌ ಶೆಟ್ಟಿ, ಬೋಳ ಸದಾಶಿವ ಶೆಟ್ಟಿ, ಕುತ್ಯಾರು ನವೀನ್‌ ಶೆಟ್ಟಿ, ಅನಂತಕೃಷ್ಣ ಶೆಣೈ, ಮುಟ್ಲುಪಾಡಿ ಸತೀಶ್‌ ಶೆಟ್ಟಿ , ಸೋಜನ್‌ ಪಿ. ಜೇಮ್ಸ್‌, ಯುವಮೋರ್ಚಾದ ಅಧ್ಯಕ್ಷ ಕರುಣಾಕರ, ರೇಶ್ಮಾ ಉದಯ ಶೆಟ್ಟಿ ಇನ್ನಾ , ಅನಿತಾ ಆರ್‌. ಅಂಚನ್‌, ಮಾಲಿನಿ ಜೆ. ಶೆಟ್ಟಿ, ಪ್ರಮಿಳಾ ಉಪಸ್ಥಿತರಿದ್ದರು.ರವೀಂದ್ರ ಕುಮಾರ್‌ ಸ್ವಾಗತಿಸಿ, ಸಾಣೂರು ನರಸಿಂಹ ಕಾಮತ್‌ ನಿರೂಪಿಸಿದರು.

ನಿದ್ದೆಯಲ್ಲಿರುವ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿದ್ದೆಯಲ್ಲಿದ್ದೇ ಆಡಳಿತ ನಡೆಸಿದ್ದಾರೆ. ರಾಜ್ಯದ ಜನತೆಗೆ ಸುರಕ್ಷತೆ ಇಲ್ಲದಂತಾಗಿದೆ. ಕಳೆದ 5 ವರ್ಷಗಳಲ್ಲಿ  ದೇಶದಲ್ಲಿಯೇ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ರಾಜ್ಯ ಕರ್ನಾಟಕ. ಅಧಿಕಾರಿಗಳ ಆತ್ಮಹತ್ಯೆ, ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಕೂಡ ನಡೆದಿದೆ. ಕೇರಳವನ್ನೂ ಮೀರಿಸಿ ದೇಶದಲ್ಲಿಯೇ ಹಿಂದೂ ಕಾರ್ಯಕರ್ತರ ಹತ್ಯೆಯಾಗಿರುವುದು ಕೂಡ ಕರ್ನಾಟಕದಲ್ಲಿ.  ಕಳೆದ 5 ವರ್ಷಗಳಿಂದ ರಾ ಜ್ಯವನ್ನು ಹಂತಕರ ನಾಡನ್ನಾಗಿ ಸಿದ್ಧರಾಮಯ್ಯನವರು ಮಾಡಿದ್ದಾರೆ ಎಂದು ಟೀಕಿಸಿದ ಅವರು, ಈ ಬಾರಿ ಕಾಂಗ್ರೆಸ್‌ ಸರಕಾರವನ್ನು ಕಿತ್ತೂಗೆದು ಕಮಲ ಅರಳಿಸಬೇಕಾಗಿದೆ ಎಂದು ನಳಿನ್‌ ಕುಮಾರ್‌ ಹೇಳಿದರು.

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

15 minutes ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

3 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

3 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

3 hours ago