ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆಗಳ ನಿರ್ಮಾಣಕ್ಕೆ 13 ಕೋಟಿ ರೂ. ಅನುದಾನ ಬಿಡುಗಡೆ – vishwanews24

Featured, ಉಡುಪಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆಗಳ ನಿರ್ಮಾಣಕ್ಕೆ 13 ಕೋಟಿ ರೂ. ಅನುದಾನ ಬಿಡುಗಡೆ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆ ಅಧೀನದಲ್ಲಿ ಬರುವ ಪ್ರಮುಖ ನಗರಗಳನ್ನು ಸಂಪರ್ಕಿರಾಜ್ಯ ಹೆದ್ದಾರಿಗಳನ್ನು ಹಾಗೂ ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳನ್ನು ಮತ್ತು ಸೇತುವೆಗಳನ್ನು ಅಭಿವೃದ್ಧಿಪಡಿಸಲು ಶಾಸಕ ವಿ ಸುನಿಲ್ ಕುಮಾರ್ ರವರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರು. ಈ ಹಿನ್ನೆಲೆ ರಾಜ್ಯ ಸರಕಾರ ಲೋಕೋಪಯೋಗಿ ಇಲಾಖೆಯಿಂದ ಒಟ್ಟು 13 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.

ಈ ಕೆಳಗಿನ ರಸ್ತೆಗಳು ಮತ್ತು ಸೇತುವೆಗಳು ಈ ಅನುದಾನದಲ್ಲಿ ಅಭಿವೃದ್ಧಿಗೊಂಡು ಸಾರ್ವಜನಿಕ ಸಂಚಾರಕ್ಕೆ ಇನ್ನಷ್ಟು ಅನುಕೂಲಕರವಾಗಲಿದೆ.

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ – vishwanews24

ಕಾರ್ಕಳ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಕಾಮಗಾರಿಗಳ ವಿವರ:-

*ಮುದ್ರಾಡಿ – ಹೆಬ್ರಿ-ಬ್ರಹ್ಮಾವರ ರಾಜ್ಯ ಹೆದ್ದಾರಿ ಮುದ್ರಾಡಿ ಪೇಟೆಯಿಂದ ಜರುವತ್ತು ಸೇತುವೆವರೆಗೆ ರಸ್ತೆಯ ನವೀಕರಣಗೊಳಿಸುವುದಕ್ಕೆ 120 ಲಕ್ಷ. ರೂ.

*ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ-37ರ ಚೆಂಡೆ ಬಸದಿ ಕ್ರಾಸ್-ಬಜಗೋಳಿವರೆಗೆ ರಸ್ತೆಯನ್ನು ನವೀಕರಣಗೊಳಿಸುವುದಕ್ಕೆ 150 ಲಕ್ಷ ರೂ.

*ಕಾಂಜರಕಟ್ಟೆ – ಇನ್ನಾ – ಸಾಂತೂರುಕೊಪ್ಲ ಮುಂಡ್ಕೂರು ಕಜೆಮಾರಿಗುಡಿ-ಸಚ್ಚರಿಪೇಟೆ ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗೆ 100 ಲಕ್ಷ ರೂ.

*ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾ ಮುಖ್ಯ ರಸ್ತೆಯ ವಂಜಾರಕಟ್ಟೆಯಿಂದ ಬೋಪಾಡಿ ಸೇತುವೆವರೆಗೆ ರಸ್ತೆಯನ್ನು ಅಭಿವೃದ್ಧಿಗೊಳಿಸುವುದಕ್ಕೆ 180.00 ಲಕ್ಷ ರೂ.

*ಅಜೆಕಾರು-ಹರ್ಮುಂಡೆ -ಜಾರ್ಕಳ-ಕೆರವಾಶೆ ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗೆ 250.00 ಲಕ್ಷ ರೂ.

*ದುರ್ಗಾ -ಮುಂಡ್ಲಿ- ಶಿರ್ಲಾಲು ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗೆ 250.00 ಲಕ್ಷ ರೂ.

*ಮುಡಾರು ರಾಜ್ಯಹೆದ್ದಾರಿ ರಾಮೇರುಗುತ್ತು ಬಳಿ ಶಿಥಿಲಗೊಂಡಿರುವ ಕಿರಿದಾದ ಹಳೆಯ ಸೇತುವೆಯನ್ನು ಮರುನಿರ್ಮಾಣ ಮಾಡುವುದಕ್ಕೆ 100.00 ಲಕ್ಷ ರೂ.

*ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾಮುಖ್ಯ ರಸ್ತೆಯಲ್ಲಿ ಅತಿಯಾದ ಮಳೆಯಿಂದ ಹಾನಿಗೊಂಡಿರುವ ಕಿರಿದಾದ ಸೇತುವೆಯ (ಬರಬೈಲು) ಮರುನಿರ್ಮಾಣಕ್ಕೆ 150.00 ಲಕ್ಷ ರೂ. ಬಿಡುಗಡೆ ಮಾಡಗಾಗಿದೆ ಎಂದು ಕಾರ್ಕಳ ವಿ. ಸುನೀಲ್ ಕುಮಾರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ – vishwanews24

Leave a Reply