ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆ ಅಧೀನದಲ್ಲಿ ಬರುವ ಪ್ರಮುಖ ನಗರಗಳನ್ನು ಸಂಪರ್ಕಿರಾಜ್ಯ ಹೆದ್ದಾರಿಗಳನ್ನು ಹಾಗೂ ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳನ್ನು ಮತ್ತು ಸೇತುವೆಗಳನ್ನು ಅಭಿವೃದ್ಧಿಪಡಿಸಲು ಶಾಸಕ ವಿ ಸುನಿಲ್ ಕುಮಾರ್ ರವರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರು. ಈ ಹಿನ್ನೆಲೆ ರಾಜ್ಯ ಸರಕಾರ ಲೋಕೋಪಯೋಗಿ ಇಲಾಖೆಯಿಂದ ಒಟ್ಟು 13 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.
ಈ ಕೆಳಗಿನ ರಸ್ತೆಗಳು ಮತ್ತು ಸೇತುವೆಗಳು ಈ ಅನುದಾನದಲ್ಲಿ ಅಭಿವೃದ್ಧಿಗೊಂಡು ಸಾರ್ವಜನಿಕ ಸಂಚಾರಕ್ಕೆ ಇನ್ನಷ್ಟು ಅನುಕೂಲಕರವಾಗಲಿದೆ.
ಕಾರ್ಕಳ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಕಾಮಗಾರಿಗಳ ವಿವರ:-
*ಮುದ್ರಾಡಿ – ಹೆಬ್ರಿ-ಬ್ರಹ್ಮಾವರ ರಾಜ್ಯ ಹೆದ್ದಾರಿ ಮುದ್ರಾಡಿ ಪೇಟೆಯಿಂದ ಜರುವತ್ತು ಸೇತುವೆವರೆಗೆ ರಸ್ತೆಯ ನವೀಕರಣಗೊಳಿಸುವುದಕ್ಕೆ 120 ಲಕ್ಷ. ರೂ.
*ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ-37ರ ಚೆಂಡೆ ಬಸದಿ ಕ್ರಾಸ್-ಬಜಗೋಳಿವರೆಗೆ ರಸ್ತೆಯನ್ನು ನವೀಕರಣಗೊಳಿಸುವುದಕ್ಕೆ 150 ಲಕ್ಷ ರೂ.
*ಕಾಂಜರಕಟ್ಟೆ – ಇನ್ನಾ – ಸಾಂತೂರುಕೊಪ್ಲ ಮುಂಡ್ಕೂರು ಕಜೆಮಾರಿಗುಡಿ-ಸಚ್ಚರಿಪೇಟೆ ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗೆ 100 ಲಕ್ಷ ರೂ.
*ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾ ಮುಖ್ಯ ರಸ್ತೆಯ ವಂಜಾರಕಟ್ಟೆಯಿಂದ ಬೋಪಾಡಿ ಸೇತುವೆವರೆಗೆ ರಸ್ತೆಯನ್ನು ಅಭಿವೃದ್ಧಿಗೊಳಿಸುವುದಕ್ಕೆ 180.00 ಲಕ್ಷ ರೂ.
*ಅಜೆಕಾರು-ಹರ್ಮುಂಡೆ -ಜಾರ್ಕಳ-ಕೆರವಾಶೆ ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗೆ 250.00 ಲಕ್ಷ ರೂ.
*ದುರ್ಗಾ -ಮುಂಡ್ಲಿ- ಶಿರ್ಲಾಲು ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗೆ 250.00 ಲಕ್ಷ ರೂ.
*ಮುಡಾರು ರಾಜ್ಯಹೆದ್ದಾರಿ ರಾಮೇರುಗುತ್ತು ಬಳಿ ಶಿಥಿಲಗೊಂಡಿರುವ ಕಿರಿದಾದ ಹಳೆಯ ಸೇತುವೆಯನ್ನು ಮರುನಿರ್ಮಾಣ ಮಾಡುವುದಕ್ಕೆ 100.00 ಲಕ್ಷ ರೂ.
*ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾಮುಖ್ಯ ರಸ್ತೆಯಲ್ಲಿ ಅತಿಯಾದ ಮಳೆಯಿಂದ ಹಾನಿಗೊಂಡಿರುವ ಕಿರಿದಾದ ಸೇತುವೆಯ (ಬರಬೈಲು) ಮರುನಿರ್ಮಾಣಕ್ಕೆ 150.00 ಲಕ್ಷ ರೂ. ಬಿಡುಗಡೆ ಮಾಡಗಾಗಿದೆ ಎಂದು ಕಾರ್ಕಳ ವಿ. ಸುನೀಲ್ ಕುಮಾರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…
ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…
ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…