ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆ ಅಧೀನದಲ್ಲಿ ಬರುವ ಪ್ರಮುಖ ನಗರಗಳನ್ನು ಸಂಪರ್ಕಿರಾಜ್ಯ ಹೆದ್ದಾರಿಗಳನ್ನು ಹಾಗೂ ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳನ್ನು ಮತ್ತು ಸೇತುವೆಗಳನ್ನು ಅಭಿವೃದ್ಧಿಪಡಿಸಲು ಶಾಸಕ ವಿ ಸುನಿಲ್ ಕುಮಾರ್ ರವರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರು. ಈ ಹಿನ್ನೆಲೆ ರಾಜ್ಯ ಸರಕಾರ ಲೋಕೋಪಯೋಗಿ ಇಲಾಖೆಯಿಂದ ಒಟ್ಟು 13 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.
ಈ ಕೆಳಗಿನ ರಸ್ತೆಗಳು ಮತ್ತು ಸೇತುವೆಗಳು ಈ ಅನುದಾನದಲ್ಲಿ ಅಭಿವೃದ್ಧಿಗೊಂಡು ಸಾರ್ವಜನಿಕ ಸಂಚಾರಕ್ಕೆ ಇನ್ನಷ್ಟು ಅನುಕೂಲಕರವಾಗಲಿದೆ.
ಕಾರ್ಕಳ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಕಾಮಗಾರಿಗಳ ವಿವರ:-
*ಮುದ್ರಾಡಿ – ಹೆಬ್ರಿ-ಬ್ರಹ್ಮಾವರ ರಾಜ್ಯ ಹೆದ್ದಾರಿ ಮುದ್ರಾಡಿ ಪೇಟೆಯಿಂದ ಜರುವತ್ತು ಸೇತುವೆವರೆಗೆ ರಸ್ತೆಯ ನವೀಕರಣಗೊಳಿಸುವುದಕ್ಕೆ 120 ಲಕ್ಷ. ರೂ.
*ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ-37ರ ಚೆಂಡೆ ಬಸದಿ ಕ್ರಾಸ್-ಬಜಗೋಳಿವರೆಗೆ ರಸ್ತೆಯನ್ನು ನವೀಕರಣಗೊಳಿಸುವುದಕ್ಕೆ 150 ಲಕ್ಷ ರೂ.
*ಕಾಂಜರಕಟ್ಟೆ – ಇನ್ನಾ – ಸಾಂತೂರುಕೊಪ್ಲ ಮುಂಡ್ಕೂರು ಕಜೆಮಾರಿಗುಡಿ-ಸಚ್ಚರಿಪೇಟೆ ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗೆ 100 ಲಕ್ಷ ರೂ.
*ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾ ಮುಖ್ಯ ರಸ್ತೆಯ ವಂಜಾರಕಟ್ಟೆಯಿಂದ ಬೋಪಾಡಿ ಸೇತುವೆವರೆಗೆ ರಸ್ತೆಯನ್ನು ಅಭಿವೃದ್ಧಿಗೊಳಿಸುವುದಕ್ಕೆ 180.00 ಲಕ್ಷ ರೂ.
*ಅಜೆಕಾರು-ಹರ್ಮುಂಡೆ -ಜಾರ್ಕಳ-ಕೆರವಾಶೆ ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗೆ 250.00 ಲಕ್ಷ ರೂ.
*ದುರ್ಗಾ -ಮುಂಡ್ಲಿ- ಶಿರ್ಲಾಲು ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗೆ 250.00 ಲಕ್ಷ ರೂ.
*ಮುಡಾರು ರಾಜ್ಯಹೆದ್ದಾರಿ ರಾಮೇರುಗುತ್ತು ಬಳಿ ಶಿಥಿಲಗೊಂಡಿರುವ ಕಿರಿದಾದ ಹಳೆಯ ಸೇತುವೆಯನ್ನು ಮರುನಿರ್ಮಾಣ ಮಾಡುವುದಕ್ಕೆ 100.00 ಲಕ್ಷ ರೂ.
*ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾಮುಖ್ಯ ರಸ್ತೆಯಲ್ಲಿ ಅತಿಯಾದ ಮಳೆಯಿಂದ ಹಾನಿಗೊಂಡಿರುವ ಕಿರಿದಾದ ಸೇತುವೆಯ (ಬರಬೈಲು) ಮರುನಿರ್ಮಾಣಕ್ಕೆ 150.00 ಲಕ್ಷ ರೂ. ಬಿಡುಗಡೆ ಮಾಡಗಾಗಿದೆ ಎಂದು ಕಾರ್ಕಳ ವಿ. ಸುನೀಲ್ ಕುಮಾರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…