Featured

ಕಾರ್ಕಳ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತ್ಯು ; ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಾರ್ಕಳ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತ್ಯು ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ: ವೈದ್ಯರ ನಿರ್ಲಕ್ಷ್ಯದ ಕುರಿತು ಉಡುಪಿ ಜಿಲ್ಲಾ ಸರ್ಜನ್ ನೀಡಿದ ವರದಿಯ ಆಧಾರದಂತೆ ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣಕ್ಕೆ ಝುಬೈದ(52) ಎಂಬವರು ಮೇ 10ರಂದು ಕಾರ್ಕಳ ಸ್ಪಂದನಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಡ್ರಿಪ್ಸ್ ಹಾಕಿದರು. ಈ ವೇಳೆ ವೈದ್ಯರು ಬಂದು ಪರಿಶೀಲಿಸುವಂತೆ ಝುಬೈದ ಅವರ ಮಗಳು ಮುಬೀನಾ ಕೇಳಿಕೊಂಡರು, ವೈದ್ಯರು ಬಂದಿರುವುದಿಲ್ಲ, ನಂತರ ಬಂದ ಡಾ.ನಾಗರತ್ನ ಕೂಡಲೇ ಆಪರೇಷನ್ ಮಾಡಬೇಕು, ಝುಬೇದ ಅವರ ಜೀವಕ್ಕೆ ಅಪಾಯ ಇದೆ ಎಂದು ಹೇಳಿದರು.

ನಂತರ ಅವರನ್ನು ಆಸ್ಪತ್ರೆಯ ಥಿಯೇಟರ್‌ಗೆ ಕರೆದುಕೊಂಡು ಹೋಗಿದ್ದು, ನಂತರ ಡಾ.ನಾಗರತ್ನ ಡಾ.ರೆಹಮತ್ತುಲ್ಲಾ ಹಾಗೂ ಡಾ.ತುಷಾರ ಆಪರೇಷನ್ ಥಿಯೇಟರ್ ಒಳಗಡೆ ಹೋಗಿದ್ದು, ನಂತರ ಹೊರಗಡೆ ಬಂದ ಡಾ.ರೆಹಮತ್ತುಲ್ಲಾ, ಝುಬೈದ ಮೃತಪಟ್ಟಿರುವುದಾಗಿ ತಿಳಿಸಿದರು. ಝುಬೈದ ಅವರಿಗೆ ವೈದ್ಯಾಧಿಕಾರಿಯವರು ಸಮಯಕ್ಕೆ ಸರಿಯಾದ ಚಿಕಿತ್ಸೆ ನೀಡದೇ ಹಾಗೂ ಸರಿಯಾಗಿ ಪರೀಕ್ಷೆ ಮಾಡದೇ ನಿರ್ಲಕ್ಷತನದಿಂದ ಆಪರೇಷನ್ ಮಾಡಿರುವುದು ಎಂದು ಆರೋಪಿಸಿ ಮುಬೀನಾ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಮೃತ ಝುಬೈದ ಅವರ ಮರಣದ ಬಗ್ಗೆ ಹಾಗೂ ವೈಧ್ಯಾಧಿಕಾರಿಯವರ ನಿರ್ಲಕ್ಷತೆಯ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ಕೋರಿಕೆ ಪತ್ರ ನೀಡಿದ್ದು ಈ ಬಗ್ಗೆ ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಎಚ್.ಅಶೋಕ ಪರಿಶೀಲನೆ ನಡೆಸಿ ವರದಿ ನೀಡಿದ್ದರು.

ಈ ವರದಿಯಲ್ಲಿ ಆರೋಪಿ ವೈಧ್ಯಾಧಿಕಾರಿಗಳಾದ ಡಾ.ನಾಗರತ್ನ ಡಾ.ರೆಹಮತ್ತುಲ್ಲಾ ಹಾಗೂ ಡಾ.ತುಷಾರ ಎಂಬವರು ಆಪರೇಶನ್ ಮಾಡುವ ಮೊದಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಇರುವುದು ಮತ್ತು ಸಾಕಷ್ಟು ಕಾಲಾವಕಾಶ ಇದ್ದರೂ ರೋಗಿಯ ಸ್ಥಿತಿಗತಿಯ ಬಗ್ಗೆ ರೋಗಿಗೆ ಸಂಬಂಧ ಪಟ್ಟವರಿಗೆ ಮಾಹಿತಿ ನೀಡದೇ ಇರುವುದು ಕಂಡು ಬಂದಿದೆ. ಅದೇ ರೀತಿ ರೋಗಿ ಆಪರೇಷನ್ ಆಗುವಾಗಲೇ ಮೃತಪಟ್ಟಿ ರುವುದು ವೈದ್ಯಾಧಿಕಾರಿಗಳ ಲಿಖಿತ ಹೇಳಿಕೆಯಿಂದ ದೃಡಪಟ್ಟಿದೆ. ಅದರಂತೆ ಶಸ್ತ್ರ ಚಿಕಿತ್ಸೆ ನೀಡಿದ ವೈದ್ಯರ ನಿರ್ಲಕ್ಷತನ ಮೇಲ್ಮೊಟಕ್ಕೆ ಕಂಡು ಬಂದಿರುವುದು ಈ ವರದಿ ಅಭಿಪ್ರಾಯ ಪಟ್ಟಿದೆ. ಅದರಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago