ಕಾರ್ಕಳ : ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ಮಹಿಳೆಯೊಬ್ಬರ ಚಿನ್ನದ ಕರಿಮಣಿ ಸರ ಕಳವಾಗಿರುವ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಜ.15 ರಂದು ಹೆರಿಗೆಗಾಗಿ ದಾಖಲಾಗಿದ್ದ ದ.ಕ ಜಿಲ್ಲೆಯ ಬೆಳ್ತಂಗಡಿಯ ಮೋಗ್ರು ಗ್ರಾಮದ ಉಷಾ ಅವರು ಜ.17 ರಂದು ಮದ್ಯಾಹ್ನದ ವೇಳೆ 2:30 ಕ್ಕೆ ವಾರ್ಡ್ ನೊಳಗಿರುವ ಬಾತ್ ರೂಮ್ ಗೆ ಸ್ನಾನಕ್ಕೆಂದು ಹೋಗಿದ್ದರು. ಈ ವೇಳೆ ತಮ್ಮ 1.30 ಲಕ್ಷ ರೂ. ಮೌಲ್ಯದ 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ತೆಗೆದು ಬಾತ್ ರೂಮ್ ನಲ್ಲಿ ಸಿಕ್ಕಿಸಿ ಇಟ್ಟಿದ್ದರು.
ಈ ನಡುವೆ ಸ್ನಾನ ಮಾಡುವ ಸಮಯ ಅವರಿಗೆ ತಲೆ ತಿರುಗಿದಂತಾಗಿ ಅವರನ್ನು ಅವರ ತಾಯಿ ಮೋಹಿನಿ ಅವರು ಬೆಡ್ಡಿನಲ್ಲಿ ಕರೆದುಕೊಂಡು ಬಂದು ಮಲಗಿಸಿದ್ದರು. ಬಳಿಕ ಒಂದು ಗಂಟೆಯ ನಂತರ ಕರಿಮಣಿಸರ ಕಾಣಿಸದೇ ಇದ್ದು ಬಾತ್ ರೂಮಿನಲ್ಲಿ ಹೋಗಿ ನೋಡಿದಾಗ ಕರಿಮಣಿಸರ ಅಲ್ಲಿ ಇರಲಿಲ್ಲ ಆದ್ದರಿಂದ ಬಾತ್ ರೂಮಿನಲ್ಲಿ ಇಟ್ಟಿದ್ದ 1,30,000 ರೂ. ಮೌಲ್ಯದ ಕರಿಮಣಿ ಸರ ಕಳವಾಗಿದೆ ಎಂಬುದಾಗಿ ಉಷಾ ಅವರ ಪತಿ ಸಂಕೇತ್ ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Join our Whatsapp group by clicking the below link 👇👇
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…