ಕಾರ್ಕಳ : ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ಮಹಿಳೆಯೊಬ್ಬರ ಚಿನ್ನದ ಕರಿಮಣಿ ಸರ ಕಳವಾಗಿರುವ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಜ.15 ರಂದು ಹೆರಿಗೆಗಾಗಿ ದಾಖಲಾಗಿದ್ದ ದ.ಕ ಜಿಲ್ಲೆಯ ಬೆಳ್ತಂಗಡಿಯ ಮೋಗ್ರು ಗ್ರಾಮದ ಉಷಾ ಅವರು ಜ.17 ರಂದು ಮದ್ಯಾಹ್ನದ ವೇಳೆ 2:30 ಕ್ಕೆ ವಾರ್ಡ್ ನೊಳಗಿರುವ ಬಾತ್ ರೂಮ್ ಗೆ ಸ್ನಾನಕ್ಕೆಂದು ಹೋಗಿದ್ದರು. ಈ ವೇಳೆ ತಮ್ಮ 1.30 ಲಕ್ಷ ರೂ. ಮೌಲ್ಯದ 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ತೆಗೆದು ಬಾತ್ ರೂಮ್ ನಲ್ಲಿ ಸಿಕ್ಕಿಸಿ ಇಟ್ಟಿದ್ದರು.
ಈ ನಡುವೆ ಸ್ನಾನ ಮಾಡುವ ಸಮಯ ಅವರಿಗೆ ತಲೆ ತಿರುಗಿದಂತಾಗಿ ಅವರನ್ನು ಅವರ ತಾಯಿ ಮೋಹಿನಿ ಅವರು ಬೆಡ್ಡಿನಲ್ಲಿ ಕರೆದುಕೊಂಡು ಬಂದು ಮಲಗಿಸಿದ್ದರು. ಬಳಿಕ ಒಂದು ಗಂಟೆಯ ನಂತರ ಕರಿಮಣಿಸರ ಕಾಣಿಸದೇ ಇದ್ದು ಬಾತ್ ರೂಮಿನಲ್ಲಿ ಹೋಗಿ ನೋಡಿದಾಗ ಕರಿಮಣಿಸರ ಅಲ್ಲಿ ಇರಲಿಲ್ಲ ಆದ್ದರಿಂದ ಬಾತ್ ರೂಮಿನಲ್ಲಿ ಇಟ್ಟಿದ್ದ 1,30,000 ರೂ. ಮೌಲ್ಯದ ಕರಿಮಣಿ ಸರ ಕಳವಾಗಿದೆ ಎಂಬುದಾಗಿ ಉಷಾ ಅವರ ಪತಿ ಸಂಕೇತ್ ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Join our Whatsapp group by clicking the below link 👇👇
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…