ಕಾರ್ಕಳ : ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ಮಹಿಳೆಯೊಬ್ಬರ ಚಿನ್ನದ ಕರಿಮಣಿ ಸರ ಕಳವಾಗಿರುವ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಜ.15 ರಂದು ಹೆರಿಗೆಗಾಗಿ ದಾಖಲಾಗಿದ್ದ ದ.ಕ ಜಿಲ್ಲೆಯ ಬೆಳ್ತಂಗಡಿಯ ಮೋಗ್ರು ಗ್ರಾಮದ ಉಷಾ ಅವರು ಜ.17 ರಂದು ಮದ್ಯಾಹ್ನದ ವೇಳೆ 2:30 ಕ್ಕೆ ವಾರ್ಡ್ ನೊಳಗಿರುವ ಬಾತ್ ರೂಮ್ ಗೆ ಸ್ನಾನಕ್ಕೆಂದು ಹೋಗಿದ್ದರು. ಈ ವೇಳೆ ತಮ್ಮ 1.30 ಲಕ್ಷ ರೂ. ಮೌಲ್ಯದ 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ತೆಗೆದು ಬಾತ್ ರೂಮ್ ನಲ್ಲಿ ಸಿಕ್ಕಿಸಿ ಇಟ್ಟಿದ್ದರು.
ಈ ನಡುವೆ ಸ್ನಾನ ಮಾಡುವ ಸಮಯ ಅವರಿಗೆ ತಲೆ ತಿರುಗಿದಂತಾಗಿ ಅವರನ್ನು ಅವರ ತಾಯಿ ಮೋಹಿನಿ ಅವರು ಬೆಡ್ಡಿನಲ್ಲಿ ಕರೆದುಕೊಂಡು ಬಂದು ಮಲಗಿಸಿದ್ದರು. ಬಳಿಕ ಒಂದು ಗಂಟೆಯ ನಂತರ ಕರಿಮಣಿಸರ ಕಾಣಿಸದೇ ಇದ್ದು ಬಾತ್ ರೂಮಿನಲ್ಲಿ ಹೋಗಿ ನೋಡಿದಾಗ ಕರಿಮಣಿಸರ ಅಲ್ಲಿ ಇರಲಿಲ್ಲ ಆದ್ದರಿಂದ ಬಾತ್ ರೂಮಿನಲ್ಲಿ ಇಟ್ಟಿದ್ದ 1,30,000 ರೂ. ಮೌಲ್ಯದ ಕರಿಮಣಿ ಸರ ಕಳವಾಗಿದೆ ಎಂಬುದಾಗಿ ಉಷಾ ಅವರ ಪತಿ ಸಂಕೇತ್ ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Join our Whatsapp group by clicking the below link 👇👇
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…