ಕಾರ್ಕಳ : ಐತಿಹಾಸಿಕ ಅನಂತಶಯನ ದೇವಸ್ಥಾನದ ಎದುರುಗಡೆಯ ರಸ್ತೆಯಲ್ಲಿ ಕುಡುಕನೊಬ್ಬ ಸಾರ್ವಜನಿಕ ರಸ್ತೆಯಲ್ಲಿ ಮಲಗಿ ಅವಾಂತರ ಸೃಷ್ಠಿಸಿದ ಘಟನೆ ಬುಧವಾರ ಮಧ್ಯಾಹ್ನ ನಡೆಸಿದೆ.
ಬಿಳಿ ಶರ್ಟ್ ಹಾಗೂ ಕಾವಿ ಲುಂಗಿ ಧರಿಸಿಕೊಂಡಿದ ವ್ಯಕ್ತಿ ಅನಂತಶಯನ ದೇವಸ್ಥಾನ ಎದುರುಗಡೆಯಲ್ಲಿ ಇರುವ ಸ್ವಾತಂತ್ರ್ಯ ಚಳುವಳಿ ಕಟ್ಟೆಯ ಪಕ್ಕದ ಸಾರ್ವಜನಿಕ ರಸ್ತೆಯಲ್ಲಿ ಉತ್ತರ ದಿಕ್ಕಿ ತಲೆ ಇಟ್ಟು ಮಲಗಿದ್ದನು.ಕುಡುಕನ ಅವಾಂತರಕ್ಕೆ ವಾಹನ ಸಂಚಾರಕ್ಕೂ ಅಡಚಣೆಯಾಗಿತ್ತು. ವಾಹನ ಚಾಲಕರು ನಿಯಂತ್ರಣ ಕಳೆದು ಕೊಂಡಿದ್ದರೆ ಆ ಪ್ರದೇಶದಲ್ಲಿ ಅನಾಹುತವೇ ನಡೆಯುತ್ತಿತ್ತು.
ಇದನೆಲ್ಲ ಗಮನಿಸಿದ ಸ್ಥಳೀಯರು ಕುಡುಕನನ್ನು ಸಮೀಪದ ಪುಟ್ ಪಾತ್ ಗೆ ಹೊತ್ತು ಮಲಗಿಸಿದರು. ತುಂತುರು ಮಳೆಯ ಸಿಂಚನದಲ್ಲಿ ಪುಟ್ ಪಾತ್ ನಲ್ಲಿ ಮಲಗಿದ್ದ ಕುಡುಕ ಮದ್ಯದ ನಶೆ ಇಳಿಯುತ್ತಿದ್ದಂತೆ ಒದ್ದೆ ಬಟ್ಟೆಯಲ್ಲಿ ಅಲ್ಲಿಂದ ಹೆಜ್ಜೆ ಹಾಕಿ ಬೇರೆಡೆಗೆ ಹೊರಟು ಹೋಗಿದ್ದಾನೆ.
ರಸ್ತೆಯಲ್ಲಿ ಮಲಗಿದ್ದ ಕುಡುಕನ ಅವಾಂತರದ ದೃಶ್ಯಾವಳಿಯನ್ನು ವಕೀಲ ಅನಿಲ್ ಕುಮಾರ್ ನಿಟ್ಟೆ ಅವರು ತನ್ನ ಮೊಬೈಲ್ ನಲ್ಲಿ ಫೋಟೋ ಸೆರೆ ಹಿಡಿದಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…