ಕಾರ್ಕಳ: ಸಾಲಬಾಧೆಯಿಂದ ವಾದ್ಯಗಾರಿಕೆ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆ – VIshwanews24

Featured, ಉಡುಪಿ

ಕಾರ್ಕಳ: ಸಾಲಬಾಧೆಯಿಂದ ವಾದ್ಯಗಾರಿಕೆ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆ – VIshwanews24

ಕಾರ್ಕಳ: ಸಾಲಬಾಧೆಯಿಂದ ಮನನೊಂದು ವಾದ್ಯಗಾರಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂದಳಿಕೆ ಗ್ರಾಮದಲ್ಲಿ ನ.19 ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ನಂದಳಿಕೆ ಗ್ರಾಮದ ಮಂಜುನಾಥ ದೇವಾಡಿಗ(43) ಎಂದು ಗುರುತಿಸಲಾಗಿದೆ.

ಮೃತರ ತಮ್ಮ ನೀಡಿದ ದೂರಿನಂತೆ, ಮಂಜುನಾಥ ಅವರು ವಾದ್ಯಗಾರಿಕೆ ಕೆಲಸ ಮಾಡುತ್ತಿದ್ದು ಒಂದು ವರ್ಷದಿಂದ ನಂದಳಿಕೆಯಲ್ಲಿ ಹೊಸ ಮನೆ ಮಾಡಿ ವಾಸವಾಗಿದ್ದರು. ಮನೆ ಮಾಡಿದ ಸಾಲ ಬಾಕಿ ಇರುವುದಾಗಿ ಚಿಂತೆಯಲ್ಲಿದ್ದರು.

ಇದರೊಂದಿಗೆ ಮಧ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು ನ.18 ರಂದು ಮಧ್ಯಾಹ್ನ 2 ಗಂಟೆಗೆ ಮಿಯಾರಿನ ಮನೆಗೆ ಬಂದು ಬಜಗೋಳಿಗೆ ಹೋಗುವುದಾಗಿ ತಾಯಿ ವಾರಿಜಾರವರಲ್ಲಿ ಹೇಳಿಹೋದವರು ವಾಪಾಸು ಮನೆಗೂ ಬಾರದೇ ನಂದಳಿಕೆಯ ಮನೆಗೂ ಹೋಗದ ಕಾರಣ ಹುಡುಕಾಡಿದಾಗ ಮನೆಯ ಒಂದು ಕಿ.ಮೀ ದೂರದಲ್ಲಿ ಮಿಯಾರು ಹೊಳೆಯ ಸಮೀಪ ಹಾಡಿಯಲ್ಲಿ ಮರದ ಕೊಂಬೆಗೆ ನೈಲಾನ್ ಹಗ್ಗ ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಸುರತ್ಕಲ್: ಬೀಚ್ ನಲ್ಲಿ ಅನ್ಯಮತೀಯ ಜೋಡಿ ; ಪೊಲೀಸರಿಗೆ ಒಪ್ಪಿಸಲು ಮುಂದಾದಾಗ ಜೋಡಿ ಪರಾರಿ , ಯುವಕನ ಸ್ನೇಹಿತ ಪೊಲೀಸ್ ವಶಕ್ಕೆ – Vishwanews24