ಕಾರ್ಕಳ: ಸಾಲಬಾಧೆಯಿಂದ ಮನನೊಂದು ವಾದ್ಯಗಾರಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂದಳಿಕೆ ಗ್ರಾಮದಲ್ಲಿ ನ.19 ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ನಂದಳಿಕೆ ಗ್ರಾಮದ ಮಂಜುನಾಥ ದೇವಾಡಿಗ(43) ಎಂದು ಗುರುತಿಸಲಾಗಿದೆ.
ಮೃತರ ತಮ್ಮ ನೀಡಿದ ದೂರಿನಂತೆ, ಮಂಜುನಾಥ ಅವರು ವಾದ್ಯಗಾರಿಕೆ ಕೆಲಸ ಮಾಡುತ್ತಿದ್ದು ಒಂದು ವರ್ಷದಿಂದ ನಂದಳಿಕೆಯಲ್ಲಿ ಹೊಸ ಮನೆ ಮಾಡಿ ವಾಸವಾಗಿದ್ದರು. ಮನೆ ಮಾಡಿದ ಸಾಲ ಬಾಕಿ ಇರುವುದಾಗಿ ಚಿಂತೆಯಲ್ಲಿದ್ದರು.
ಇದರೊಂದಿಗೆ ಮಧ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು ನ.18 ರಂದು ಮಧ್ಯಾಹ್ನ 2 ಗಂಟೆಗೆ ಮಿಯಾರಿನ ಮನೆಗೆ ಬಂದು ಬಜಗೋಳಿಗೆ ಹೋಗುವುದಾಗಿ ತಾಯಿ ವಾರಿಜಾರವರಲ್ಲಿ ಹೇಳಿಹೋದವರು ವಾಪಾಸು ಮನೆಗೂ ಬಾರದೇ ನಂದಳಿಕೆಯ ಮನೆಗೂ ಹೋಗದ ಕಾರಣ ಹುಡುಕಾಡಿದಾಗ ಮನೆಯ ಒಂದು ಕಿ.ಮೀ ದೂರದಲ್ಲಿ ಮಿಯಾರು ಹೊಳೆಯ ಸಮೀಪ ಹಾಡಿಯಲ್ಲಿ ಮರದ ಕೊಂಬೆಗೆ ನೈಲಾನ್ ಹಗ್ಗ ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…