ಕಾರ್ಕಳ: ಸಾಲಬಾಧೆಯಿಂದ ಮನನೊಂದು ವಾದ್ಯಗಾರಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂದಳಿಕೆ ಗ್ರಾಮದಲ್ಲಿ ನ.19 ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ನಂದಳಿಕೆ ಗ್ರಾಮದ ಮಂಜುನಾಥ ದೇವಾಡಿಗ(43) ಎಂದು ಗುರುತಿಸಲಾಗಿದೆ.
ಮೃತರ ತಮ್ಮ ನೀಡಿದ ದೂರಿನಂತೆ, ಮಂಜುನಾಥ ಅವರು ವಾದ್ಯಗಾರಿಕೆ ಕೆಲಸ ಮಾಡುತ್ತಿದ್ದು ಒಂದು ವರ್ಷದಿಂದ ನಂದಳಿಕೆಯಲ್ಲಿ ಹೊಸ ಮನೆ ಮಾಡಿ ವಾಸವಾಗಿದ್ದರು. ಮನೆ ಮಾಡಿದ ಸಾಲ ಬಾಕಿ ಇರುವುದಾಗಿ ಚಿಂತೆಯಲ್ಲಿದ್ದರು.
ಇದರೊಂದಿಗೆ ಮಧ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು ನ.18 ರಂದು ಮಧ್ಯಾಹ್ನ 2 ಗಂಟೆಗೆ ಮಿಯಾರಿನ ಮನೆಗೆ ಬಂದು ಬಜಗೋಳಿಗೆ ಹೋಗುವುದಾಗಿ ತಾಯಿ ವಾರಿಜಾರವರಲ್ಲಿ ಹೇಳಿಹೋದವರು ವಾಪಾಸು ಮನೆಗೂ ಬಾರದೇ ನಂದಳಿಕೆಯ ಮನೆಗೂ ಹೋಗದ ಕಾರಣ ಹುಡುಕಾಡಿದಾಗ ಮನೆಯ ಒಂದು ಕಿ.ಮೀ ದೂರದಲ್ಲಿ ಮಿಯಾರು ಹೊಳೆಯ ಸಮೀಪ ಹಾಡಿಯಲ್ಲಿ ಮರದ ಕೊಂಬೆಗೆ ನೈಲಾನ್ ಹಗ್ಗ ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…