Featured

ಕಾರ್ಕಳ: ಸಾವಿರಾರು ಕಾರ್ಯಕರ್ತರೊಂದಿಗೆ ಸಚಿವ ಸುನೀಲ್ ಕುಮಾರ್  ನಾಮಪತ್ರ ಸಲ್ಲಿಕೆ  – Vishwanews24

ಕಾರ್ಕಳ: ಸಾವಿರಾರು ಕಾರ್ಯಕರ್ತರೊಂದಿಗೆ ಸಚಿವ ಸುನೀಲ್ ಕುಮಾರ್  ನಾಮಪತ್ರ ಸಲ್ಲಿಕೆ

ಬೃಹತ್ ಗಾತ್ರದ ಪಕ್ಷದ ಧ್ವಜ ಹಾಗೂ ಓಂಕಾರ ಧ್ವಜ ಹಿಡಿದು ಸುನೀಲ್ ಕುಮಾರ್ ಪರ ಜಯಘೋಷ

ಕಾರ್ಕಳ: ಮಾಜಿ ಸಚಿವ ಬಿಜೆಪಿ ಅಭ್ಯರ್ಥಿ‌ ವಿ.ಸುನೀಲ್ ಕುಮಾರ್ ಅವರು‌ ಬುಧವಾರದಂದು ನಾಮಪತ್ರ ಸಲ್ಲಿಸಿದರು.

ನಗರದ ಸ್ವರಾಜ್ ಮೈದಾನದಿಂದ ಹೊರಟ ಮೆರವಣಿಗೆಯು ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದ ವರೆಗೆ ಸಾಗಿಬಂದು ಅಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಪಾಲ್ಗೊಂಡವರು ಬೃಹತ್ ಗಾತ್ರದ ಪಕ್ಷದ ಧ್ವಜ ಹಾಗೂ ಓಂಕಾರ ಧ್ವಜ ಹಿಡಿದು ಪಕ್ಷದ ಹಾಗೂ ಅಭ್ಯರ್ಥಿ ಸುನೀಲ್ ಕುಮಾರ್ ಪರ ಜಯಘೋಷ ಮೊಳಗಿಸಿದರು.

ಬಿಸಿಲಿನ ತಾಪ ತೀವ್ರವಾಗಿದ್ದರೂ, ಚೆಂಡೆ ಹಾಗೂ‌ ಡಿಜೆ ಸೌಂಡ್ ಗೆ‌ ಮೆರವಣಿಗೆಯಲ್ಲಿ ಪಾಲ್ಗೊಂಡವರಲ್ಲಿ ಹುರುಪು ಹೆಚ್ಚಿಸುವಂತೆ ಮಾಡಿತು. ಮತದಾರರು ಹಾಗೂ ಸುನೀಲ್ ಕುಮಾರ್ ಅವರ ಅಭಿಮಾನಿಗಳು‌ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಆರ್ ಎಸ್ ಎಸ್ ಮುಖಂಡ ಬೋಳ ಪ್ರಭಾಕರ ಕಾಮತ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್,ಇರ್ವತ್ತೂರು ಭಾಸ್ಕರ್ ಎಸ್.ಕೋಟ್ತಾನ್, ಮಹೇಶ್ ಕುಡುಪುಲಾಜೆ, ಎಂ.ಕೆ.ವಿಜಯಕುಮಾರ್, ಮಣಿರಾಜ್ ಶೆಟ್ಟಿ, ಮಹಾವೀರ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago