Featured

ಕಾರ್ಕಳ: ಸುಟ್ಟ ಸ್ಥಿತಿಯಲ್ಲಿ ಕಾರ್ಮಿಕನ ಮೃತ ದೇಹ ಪತ್ತೆ – Vishwanews24

ಕಾರ್ಕಳ: ಸುಟ್ಟ ಸ್ಥಿತಿಯಲ್ಲಿ ಕಾರ್ಮಿಕನ ಮೃತ ದೇಹ ಪತ್ತೆ

ಕಾರ್ಕಳ : ಸಾಣುರು ಗ್ರಾಮದ ಶುಂಠಿಗುಡ್ಡೆ ಎಂಬಲ್ಲಿನ ರಬ್ಬರ್ ಪ್ಲಾಂಟೇಶನ್ ಸನ್ನಿಹದಲ್ಲಿ ಸುಟ್ಟಸ್ಥಿತಿಯಲ್ಲಿ ಕಾರ್ಮಿಕರೋರ್ವರ ಶವ ಪತ್ತೆಯಾಗಿದೆ. ಕೇರಳ ಮೂಲದ ಮಲಪ್ಪುರ ಜಿಲ್ಲೆಯ ಗೋಪಿ(60) ಎಂಬವರ ಮೃತದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ.

ರಬ್ಬರ್ ತೋಟದಲ್ಲಿ ಕಾರ್ಮಿಕನಾಗಿ ದುಡಿಯುತ್ತಿರೆಂಬ ಮಾಹಿತಿ ಲಭಿಸಿದೆ. ಕಳೆದ ಒಂದು ವಾರದ ಹಿಂದೆ ಅದೇ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬಾಹುಲೇಯನ್ ಎಂಬವರೊಂದಿಗೆ ಊರಿಗೆ ಹೋಗಿ ಹಿಂತಿರುಗಿದ್ದರು.

ಅಕ್ಟೋಬರ್ 19ರಂದು ಬೆಳಿಗ್ಗೆ 9 ಗಂಟೆಗೆ ವಸಂತ ಎಂಬವರು ಗ್ರಾಸ್ ಕಟ್ಟಿಂಗ್‌ಗೆಂದು ಆ ತೋಟದ ದ್ವಾರದ ಬಳಿಗೆ ಬಂದಿದ್ದಾಗ ಗೇಟ್ ಒಳಗಿನಿಂದ ಬೀಗ ಹಾಕಲಾಗಿದ್ದು, ಕೂಗಿ ಕರೆದರೆ ಕೆಲಸದವರು ಬಂದಿರುವುದಿಲ್ಲ. ಗೇಟ್‌ನ ಮುಂದೆ ಸ್ವಲ್ಪ ದೂರದಲ್ಲಿ ದಾರಿಯ ಬದಿಯಲ್ಲಿ ಸುಟ್ಟ ಕರಕಲಾದ ಮೃತದೇಹವೊಂದು ಕಾಣಸಿಕ್ಕಿದೆ. ಅದರ ಪಕ್ಕದಲ್ಲಿ ಲೈಟರ್ ಹಾಗೂ ಪೆಟ್ರೋಲ್ ಕ್ಯಾನಿನ ಮುಚ್ಚಳ ಕಂಡುಬಂದಿರುತ್ತದೆ ಎಂದು ಕಾಬೆಟ್ಟು ಹವಾಲ್ದಾರ್‌ಬೆಟ್ಟುವಿನ ದಿಲೀಪ್ ಎಂಬವರ ಗಮನಕ್ಕೆ ತಂದಿದ್ದರು.

ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ಮೋದಿ: ವಿಶೇಷ ಪೂಜೆ ಸಲ್ಲಿಕೆ – Vishwanews24

ದಿಲೀಪ್ ಹಾಗೂ ವಿವೇಕಾನಂದ ಶೆಣೈ ಎಂಬವರು ಗೇರುಬೀಜ ಕಾರ್ಖಾನೆಯ ಪಾಲುದಾರರಾಗಿದ್ದಾರೆ. ವಿವೇಕಾನಂದ ಶೆಣೈಯವರು ಸಾಣೂರು ಶುಂಠಿಗುಡ್ಡೆಯ ಎಂಬಲ್ಲಿ ಕೇರಳದ ಬಿಜು ಥೋಮಸ್ ಎಂಬುವವರ ಜೊತೆ ಕರಾರು ಮೂಲಕ ರಬ್ಬರ್ ಪ್ಲಾಂಟೇಶನ್ ಪಡೆದುಕೊಂಡು ವ್ಯವಹಾರ ಮಾಡಿಕೊಂಡಿರುತ್ತಾರೆ. ಪ್ಲಾಂಟೇಶನ್‌ನ ಉಸ್ತುವಾರಿಯನ್ನು ಪಿರ್ಯಾದಿದಾರ ದಿಲೀಪ್ ನೋಡಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದ ಈ ವಿಚಾರ ವಸಂತ ಅವರು ದಿಲೀಪ್ ಅವರ ಗಮನಕ್ಕೆ ತಂದಿರಲು ಕಾರಣವೆನ್ನಲಾಗಿದೆ.

ಗೋಪಿಯು ಯಾವುದೋ ಕಾರಣದಿಂದ ಬೆಂಕಿಯಿಂದ ಸುಟ್ಟು ಮೃತಪಟ್ಟಿರುತ್ತಾರೆ. ಜೊತೆಯಲ್ಲಿದ್ದ ಬಾಹುಲೇಯನ್ ಎಂಬಾತ ಕಾಣೆಯಾಗಿರುವುದರಿಂದ ಗೋಪಿಯ ಸಾವಿನ ಬಗ್ಗೆ ಸಂಶಯಕ್ಕೆ ಎಡೆಮಾಡಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.

ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ಮೋದಿ: ವಿಶೇಷ ಪೂಜೆ ಸಲ್ಲಿಕೆ – Vishwanews24

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

29 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

37 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

45 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

52 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

1 hour ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

1 hour ago