Featured

ಕಾರ್ಕಳ: ಸುಟ್ಟ ಸ್ಥಿತಿಯಲ್ಲಿ ಕಾರ್ಮಿಕನ ಮೃತ ದೇಹ ಪತ್ತೆ – Vishwanews24

ಕಾರ್ಕಳ: ಸುಟ್ಟ ಸ್ಥಿತಿಯಲ್ಲಿ ಕಾರ್ಮಿಕನ ಮೃತ ದೇಹ ಪತ್ತೆ

ಕಾರ್ಕಳ : ಸಾಣುರು ಗ್ರಾಮದ ಶುಂಠಿಗುಡ್ಡೆ ಎಂಬಲ್ಲಿನ ರಬ್ಬರ್ ಪ್ಲಾಂಟೇಶನ್ ಸನ್ನಿಹದಲ್ಲಿ ಸುಟ್ಟಸ್ಥಿತಿಯಲ್ಲಿ ಕಾರ್ಮಿಕರೋರ್ವರ ಶವ ಪತ್ತೆಯಾಗಿದೆ. ಕೇರಳ ಮೂಲದ ಮಲಪ್ಪುರ ಜಿಲ್ಲೆಯ ಗೋಪಿ(60) ಎಂಬವರ ಮೃತದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ.

ರಬ್ಬರ್ ತೋಟದಲ್ಲಿ ಕಾರ್ಮಿಕನಾಗಿ ದುಡಿಯುತ್ತಿರೆಂಬ ಮಾಹಿತಿ ಲಭಿಸಿದೆ. ಕಳೆದ ಒಂದು ವಾರದ ಹಿಂದೆ ಅದೇ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬಾಹುಲೇಯನ್ ಎಂಬವರೊಂದಿಗೆ ಊರಿಗೆ ಹೋಗಿ ಹಿಂತಿರುಗಿದ್ದರು.

ಅಕ್ಟೋಬರ್ 19ರಂದು ಬೆಳಿಗ್ಗೆ 9 ಗಂಟೆಗೆ ವಸಂತ ಎಂಬವರು ಗ್ರಾಸ್ ಕಟ್ಟಿಂಗ್‌ಗೆಂದು ಆ ತೋಟದ ದ್ವಾರದ ಬಳಿಗೆ ಬಂದಿದ್ದಾಗ ಗೇಟ್ ಒಳಗಿನಿಂದ ಬೀಗ ಹಾಕಲಾಗಿದ್ದು, ಕೂಗಿ ಕರೆದರೆ ಕೆಲಸದವರು ಬಂದಿರುವುದಿಲ್ಲ. ಗೇಟ್‌ನ ಮುಂದೆ ಸ್ವಲ್ಪ ದೂರದಲ್ಲಿ ದಾರಿಯ ಬದಿಯಲ್ಲಿ ಸುಟ್ಟ ಕರಕಲಾದ ಮೃತದೇಹವೊಂದು ಕಾಣಸಿಕ್ಕಿದೆ. ಅದರ ಪಕ್ಕದಲ್ಲಿ ಲೈಟರ್ ಹಾಗೂ ಪೆಟ್ರೋಲ್ ಕ್ಯಾನಿನ ಮುಚ್ಚಳ ಕಂಡುಬಂದಿರುತ್ತದೆ ಎಂದು ಕಾಬೆಟ್ಟು ಹವಾಲ್ದಾರ್‌ಬೆಟ್ಟುವಿನ ದಿಲೀಪ್ ಎಂಬವರ ಗಮನಕ್ಕೆ ತಂದಿದ್ದರು.

ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ಮೋದಿ: ವಿಶೇಷ ಪೂಜೆ ಸಲ್ಲಿಕೆ – Vishwanews24

ದಿಲೀಪ್ ಹಾಗೂ ವಿವೇಕಾನಂದ ಶೆಣೈ ಎಂಬವರು ಗೇರುಬೀಜ ಕಾರ್ಖಾನೆಯ ಪಾಲುದಾರರಾಗಿದ್ದಾರೆ. ವಿವೇಕಾನಂದ ಶೆಣೈಯವರು ಸಾಣೂರು ಶುಂಠಿಗುಡ್ಡೆಯ ಎಂಬಲ್ಲಿ ಕೇರಳದ ಬಿಜು ಥೋಮಸ್ ಎಂಬುವವರ ಜೊತೆ ಕರಾರು ಮೂಲಕ ರಬ್ಬರ್ ಪ್ಲಾಂಟೇಶನ್ ಪಡೆದುಕೊಂಡು ವ್ಯವಹಾರ ಮಾಡಿಕೊಂಡಿರುತ್ತಾರೆ. ಪ್ಲಾಂಟೇಶನ್‌ನ ಉಸ್ತುವಾರಿಯನ್ನು ಪಿರ್ಯಾದಿದಾರ ದಿಲೀಪ್ ನೋಡಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದ ಈ ವಿಚಾರ ವಸಂತ ಅವರು ದಿಲೀಪ್ ಅವರ ಗಮನಕ್ಕೆ ತಂದಿರಲು ಕಾರಣವೆನ್ನಲಾಗಿದೆ.

ಗೋಪಿಯು ಯಾವುದೋ ಕಾರಣದಿಂದ ಬೆಂಕಿಯಿಂದ ಸುಟ್ಟು ಮೃತಪಟ್ಟಿರುತ್ತಾರೆ. ಜೊತೆಯಲ್ಲಿದ್ದ ಬಾಹುಲೇಯನ್ ಎಂಬಾತ ಕಾಣೆಯಾಗಿರುವುದರಿಂದ ಗೋಪಿಯ ಸಾವಿನ ಬಗ್ಗೆ ಸಂಶಯಕ್ಕೆ ಎಡೆಮಾಡಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.

ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ಮೋದಿ: ವಿಶೇಷ ಪೂಜೆ ಸಲ್ಲಿಕೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

11 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago