Featured

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಉಡುಪಿ : ಕಳೆದ ಮಾರ್ಚ್ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಉದ್ಯಮಿ ಸುದೀಪ್ ರೈ ನೆಲ್ಯಾಡಿ ಎಂಬ ಯುವಕನ ಪ್ರಕರಣವು ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಈ ಸಾವಿನ ಪ್ರಕರಣವು ಇದೀಗ ಕಾನೂನು ಹೋರಾಟದ ಹಂತದಲ್ಲಿದ್ದು, ಪ್ರಮುಖ ಆರೋಪಿಯ ಜಾಮೀನು ಅರ್ಜಿ ವಜಾಗೊಂಡಿದೆ.

ಸುದೀಪ್ ರೈ ಅವರ ಸಾವಿಗೆ ಸೌಮ್ಯ ಶೆಟ್ಟಿ ಎಂಬಾಕೆಯ ಕಿರುಕುಳವೇ ಕಾರಣವೆಂದು ಆರೋಪಿಸಲಾಗಿದೆ. ಕಾರ್ಕಳ ತಾಲೂಕಿನ ಬಂಗ್ಲೆಗುಡ್ಡೆ ನಿವಾಸಿಯಾಗಿರುವ ಸೌಮ್ಯ ಶೆಟ್ಟಿ, ಸುದೀಪ್ ಅವರ ಮನೆಯವರಿಗೆ ತಿಳಿಸದೆ ಬಲವಂತವಾಗಿ ರಿಜಿಸ್ಟರ್ ಮದುವೆಯಾಗಿದ್ದಳು ಹಾಗೂ ಆಕೆಯಿಂದ ವಿಪರೀತ ಮಾನಸಿಕ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ದೊರೆತಿದ್ದೇ ಸುದೀಪ್ ಸಾವಿಗೆ ನೇರ ಕಾರಣವೆಂದು ಸುದೀಪ್ ಅವರ ಪೋಷಕರು ಮತ್ತು ಸ್ನೇಹಿತರು ಆರೋಪಿಸಿದ್ದರು.

 

ಈ ಕುರಿತು ಸುದೀಪ್ ಅವರ ತಂದೆ ಬಿ. ವಸಂತ ರೈ ನೆಲ್ಯಾಡಿ ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಉಡುಪಿ ಜಿಲ್ಲೆಯ ಎಸ್ಪಿ ಹರಿರಾಮ್ ಶಂಕರ್ ಅವರ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಏಪ್ರಿಲ್ 11 ರಂದು ಉಡುಪಿಯಲ್ಲಿ ಸೌಮ್ಯ ಶೆಟ್ಟಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಪ್ರಕರಣದ ತನಿಖೆ ಮುಂದುವರಿಯುತ್ತಿದ್ದು, ಈ ಹಿಂದೆ ಸೌಮ್ಯ ಶೆಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಏಪ್ರಿಲ್ 30 ರಂದು ಉಡುಪಿ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿತ್ತು. ಇದೀಗ ರಾಜ್ಯ ಉಚ್ಚ ನ್ಯಾಯಾಲಯ ಕೂಡ ಆಕೆಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

10 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

13 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

13 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

13 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

13 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

14 hours ago