Featured

ಕಾರ್ಕಳ : ಸುನಿಲ್ ಕುಮಾರ್ ಅವರೇ ನಿಮಗಾದ ಸೋಲನ್ನು ಮುಚ್ಚಿಟ್ಟುಕೊಂಡು ನೀವು ಕಾಂಗ್ರೆಸ್ ಪಕ್ಷದ ನಾಯಕರನ್ನು ಲೇವಡಿ ಮಾಡಿರುವುದು ಎಷ್ಟು ಸರಿ? : ಗೀತಾ ವಾಗ್ಳೆ – vishwanews24

ಕಾರ್ಕಳ : ಸುನಿಲ್ ಕುಮಾರ್ ಅವರೇ ನಿಮಗಾದ ಸೋಲನ್ನು ಮುಚ್ಚಿಟ್ಟುಕೊಂಡು ನೀವು ಕಾಂಗ್ರೆಸ್ ಪಕ್ಷದ ನಾಯಕರನ್ನು ಲೇವಡಿ ಮಾಡಿರುವುದು ಎಷ್ಟು ಸರಿ? : ಗೀತಾ ವಾಗ್ಳೆ

ಉಡುಪಿ: ಕಾರ್ಕಳದಲ್ಲಿ ಸ್ಥಾಪಿಸಿರುವ ಪರಶುರಾಮನ ಪ್ರತಿಮೆಯ ಕಾಲುಗಳು ಫೈಬರ್ ನಿಂದ ಮಾಡಲಾಗಿದೆ ಎಂದು ಹೇಳಿದ್ದ ಕಾಂಗ್ರೆಸ್ ಗೆ ಸೋಲಾಗಿದೆ ಎಂದು ಲೇವಡಿ ಮಾಡಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಅವರ ಬಗ್ಗೆ ಅನುಕಂಪ ಮೂಡುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಳೆ ಹೇಳಿದ್ದಾರೆ.

ಶಾಸಕರೇ, ಕಾಂಗ್ರೆಸ್ ಪಕ್ಷದ ಬಗ್ಗೆ ಹೇಳುವ ಮೊದಲೊಮ್ಮೆ ನ್ಯಾಯಾಲಯದ ಇನ್ನೊಂದು ತೀರ್ಪನ್ನು ನಿಮಗೆ ನೆನಪಿಸುತ್ತಿದ್ದೇವೆ. ಪರಶುರಾಮನನ್ನು ಕಾರ್ಕಳದ ಉಮಿಕಲ್ ಗುಡ್ಡದ ಮೇಲೆ ಪ್ರತಿಷ್ಠಾಪಿಸಿದಾಗ ನೀವು ಹೇಳಿದ್ದೇನು?ಈ ಮೂರ್ತಿಯನ್ನು ಪೂರ್ತಿಯಾಗಿ ಕಂಚಿನಿಂದ ತಯಾರಿಸಲಾಗಿದೆ ಎಂದಿದ್ದೀರಿ ತಾನೇ? ನಿಮ್ಮ ಹಿಂಬಾಲಕರೂ ಇದನ್ನೇ ಹೇಳಿಕೊಂಡು ತಿರುಗಿದ್ದರಲ್ಲವೇ? ಈಗ ಕೋರ್ಟ್ ಹೇಳಿರುವುದೇನು? ಈ ಪ್ರತಿಮೆ ಕಂಚಿನದ್ದಲ್ಲ ಎಂದಲ್ಲವೇ? ಕೋರ್ಟ್ ಇದನ್ನು ಸ್ಪಷ್ಟವಾಗಿ ಹೇಳಿದ್ದರೂ ಅಡಿಗೆ ಬಿದ್ದರೂ ಮೂಗು ಮೇಲೆ ಎಂಬ ಮಾತಿನಂತೆ ನಿಮಗಾದ ಸೋಲನ್ನು ಮುಚ್ಚಿಟ್ಟುಕೊಂಡು ನೀವು ಕಾಂಗ್ರೆಸ್ ಪಕ್ಷದ ನಾಯಕರನ್ನು ಲೇವಡಿ ಮಾಡಿರುವುದು ಎಷ್ಟು ಸರಿ? ಈಗ ಕಾಂಗ್ರೆಸ್ ಗೆದ್ದಿದೆ. ಸೋತಿದ್ದು ನೀವು ಎನ್ನುವುದನ್ನು ಒಪ್ಪಿಕೊಳ್ಳಿ ಎಂದು ಗೀತಾ ವಾಗ್ಳೆ ಅವರು ಹೇಳಿದ್ದಾರೆ.

ಸುನಿಲ್ ಕುಮಾರ್ ಅವರೇ, ಕಾಂಗ್ರೆಸ್ ಪಕ್ಷದವರು ಪರಶುರಾಮ ಮೂರ್ತಿಯ ನಿರ್ಮಾಣದ ಬಗ್ಗೆ ಸಂಶಯ ವ್ಯಕ್ತಪಡಿಸಿರದಿದ್ದರೆ ನೀವು ಮಾಡಿದ ಭ್ರಷ್ಟಾಚಾರದ ವಾಸನೆಯೂ ನಮ್ಮ ಮುಗ್ಧ ಮತದಾರರ ಹತ್ತಿರ ಸುಳಿಯುತ್ತಿರಲಿಲ್ಲ. ಈಗ ನಿಮ್ಮೊಳಗಿನ ಇನ್ನೊಂದು ಕರಾಳ ಮುಖ ಎಲ್ಲಾ ಮತದಾರರಿಗೂ ತಿಳಿದಿದೆ.

ಸುನಿಲ್ ಕುಮಾರ್ ಅವರೇ, ಆನೆ ಕದ್ದರೂ ಕಳ್ಳ,ಅಡಿಕೆ ಕದ್ದರೂ ಕಳ್ಳ ಎಂಬ ಗಾದೆಯ ಮಾತು ನೆನಪಿದೆಯೇ?ನೀವೆಂದದ್ದು ಕಂಚಿನ ಮೂರ್ತಿ,ಈಗ ಅದು ಕಂಚಿನ ಮೂರ್ತಿ ಅಲ್ಲ ಎಂದಾದ ಮೇಲೆ ಹಿತ್ತಾಳೆಯದ್ದಾಗಿರಲಿ ಅಥವಾ ಫೈಬರ್ ದ್ದಾಗಿರಲಿ, ಯಾವುದೇ ವ್ಯತ್ಯಾಸ ಸಿಗುವುದಿಲ್ಲ. ನೀವು ಹೇಳಿದ್ದು ಸುಳ್ಳು,ನೀವು ಮಾಡಿದ್ದು ಮೋಸ ಎಂಬುದು ಜಗಜ್ಜಾಹೀರಾಗಿದೆ. ಹೀಗಿರುವಾಗ ವೃಥಾ ಈ ಹೇಳಿಕೆ ಕೊಡಬೇಕಾದ ಅಗತ್ಯವೇನಿದೆ? ಅವಮಾನದಿಂದ ವಿಚಲಿತರಾಗಿರುವ ನೀವು ಹತಾಶರಾಗಿ ಈ ಹೇಳಿಕೆ ನೀಡಿದ್ದೀರಿ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

ಜನರ ಧಾರ್ಮಿಕ ಭಾವನೆಗಳ ಜೊತೆಗೆ ಚೆಲ್ಲಾಟವಾಡಿದ ನೀವು ಇದೇ ಜನರಲ್ಲಿ ಕ್ಷಮೆ ಕೇಳಬೇಕು.ದಿನ ಬೆಳಗಾದರೆ ಧಾರ್ಮಿಕತೆಯ ಬಗ್ಗೆ ಭಾಷಣ ಮಾಡುವ ನೀವು ಈಗ ಈ ರೀತಿ ಜನರನ್ನು ವಂಚಿಸಿದ್ದಕ್ಕಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ನಿಮ್ಮ ಮರ್ಯಾದೆಯನ್ನು ಉಳಿಸಿಕೊಳ್ಳಿ ಎಂದಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago