ಕಾರ್ಕಳ : ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಕಾರ್ಕಳ ತಾಲೂಕು ಕಚೇರಿ ಮುಂದೆ ಈ ಪ್ರತಿಭಟನೆ ನಡೆಯಿತು. ಮಾಜಿ ಸಚಿವ,ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ಘೋಷಣೆಗಳನ್ನು ಕೂಗಿ ಪ್ರತಿಭಟನಕಾರರು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ರಾಜ್ಯ ಸರಕಾರಕ್ಕೆ ಧಿಕ್ಕಾರ ಕೂಗಿದ ಪ್ರತಿಭಟನಕಾರರು,60% ಸರ್ಕಾರ ಎಂದು ಲೇವಡಿ ಮಾಡಿದರು. ರಾಜ್ಯ ಸರಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ. ಇದಲ್ಲದೆ ಹಾಲು ಸಬ್ಸಿಡಿ, ಅಕ್ರಮ ಸಕ್ರಮ ಅರ್ಜಿ ತಿರಸ್ಕಾರ ಸೇರಿದಂತೆ ರಾಜ್ಯ ಸರಕಾರದ ಜನವಿರೋಧಿ ನೀತಿಯನ್ನು ಪ್ರತಿಭಟನಕಾರರು ಖಂಡಿಸಿದರು. ಕರಾವಳಿಯ ಯಕ್ಷಗಾನ, ಕೋಳಿ ಅಂಕಗಳಿಗೂ ಕಾಂಗ್ರೆಸ್ ಸರಕಾರ ಅಡ್ಡಿ ಪಡಿಸುತ್ತಿದ್ದು ಇದೊಂದು ಹಿಂದೂ ವಿರೋಧಿ ಸರಕಾರ ಎಂದು ಸುನಿಲ್ ಕುಮಾರ್ ಟೀಕಿಸಿದರು.
ನೂರಾರು ಪ್ರತಿಭಟನಾಕಾರರು “ದಂಡ ಪಿಂಡಗಳು..” ಹಾಡು ಹಾಡುವ ಮೂಲಕ ಸರ್ಕಾರವನ್ನು ಟೀಕಿಸಿದರು.
ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…
ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…
ಶಿರ್ವ : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ…
ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…