ಕಾರ್ಕಳ: ಜ್ಯುವೆಲ್ಲರ್ಸ್ ಅಂಗಡಿಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಬೆಲೆಬಾಳುವ ಬೆಳ್ಳಿ ವಸ್ತುಗಳ ಕಳ್ಳತನ ನಡೆಸಿದ ಘಟನೆ ಕಾರ್ಕಳ ನಿಟ್ಟೆಯ ಫೆ. 26 ರ ತಡರಾತ್ರಿ ನಡೆದಿದೆ.
ಅಖಿಲೇಶ್ ಮಾಲೀಕತ್ವದ ಆರಾಧ್ಯ ಜ್ಯುವೆಲ್ಲರ್ಸ್ ಗೆ ತಡರಾತ್ರಿ 2 ಗಂಟೆಗೆ ಸುಮಾರಿಗೆ ನುಗ್ಗಿ ಕೃತ್ಯ ನಡೆಸಿದ್ದಾರೆ. ಕಳ್ಳರು ಟಿಪ್ಪರ್ ಅಡ್ಡ ಇಟ್ಟು ಅನಂತರ, ಯಾವುದೇ ರೀತಿಯಲ್ಲಿ ಗುರುತು ಸಿಗದ ಹಾಗೆ, ಮುಖಕ್ಕೆ ಮುಸುಕು ಹಾಕಿಕೊಂಡು, ಅಂಗಡಿಯ ಬೀಗ ಒಡೆದು ಒಳಗೆ ನುಗ್ಗಿ ಕಳವು ಕೃತ್ಯ ಎಸಗಿದ್ದಾರೆ.
ಕೃತ್ಯದ ಬಗ್ಗೆ ಅನುಮಾನಗೊಂಡ ಸ್ಥಳೀಯ ಅಂಗಡಿಯ ಸೆಕ್ಯೂರಿಟಿ ಗಾರ್ಡ್ ಘಟನಾ ಸ್ಥಳದತ್ತ ಹೋದಾಗ ದುಷ್ಟರ್ಮಿಗಳು ಪಿಸ್ತೂಲ್ ತೋರಿಸಿ, ಬೆದರಿಸಿದ್ದಾರೆಂಬ ಮಾಹಿತಿ ಲಭಿಸಿದೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಎಸ್ ಐ ತೇಜಸ್ವಿ ಹಾಗೂ ಸಿಬ್ಬಂದಿಗಳು ತೆರಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…