ಕಾರ್ಕಳ: ಜ್ಯುವೆಲ್ಲರ್ಸ್ ಅಂಗಡಿಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಬೆಲೆಬಾಳುವ ಬೆಳ್ಳಿ ವಸ್ತುಗಳ ಕಳ್ಳತನ ನಡೆಸಿದ ಘಟನೆ ಕಾರ್ಕಳ ನಿಟ್ಟೆಯ ಫೆ. 26 ರ ತಡರಾತ್ರಿ ನಡೆದಿದೆ.
ಅಖಿಲೇಶ್ ಮಾಲೀಕತ್ವದ ಆರಾಧ್ಯ ಜ್ಯುವೆಲ್ಲರ್ಸ್ ಗೆ ತಡರಾತ್ರಿ 2 ಗಂಟೆಗೆ ಸುಮಾರಿಗೆ ನುಗ್ಗಿ ಕೃತ್ಯ ನಡೆಸಿದ್ದಾರೆ. ಕಳ್ಳರು ಟಿಪ್ಪರ್ ಅಡ್ಡ ಇಟ್ಟು ಅನಂತರ, ಯಾವುದೇ ರೀತಿಯಲ್ಲಿ ಗುರುತು ಸಿಗದ ಹಾಗೆ, ಮುಖಕ್ಕೆ ಮುಸುಕು ಹಾಕಿಕೊಂಡು, ಅಂಗಡಿಯ ಬೀಗ ಒಡೆದು ಒಳಗೆ ನುಗ್ಗಿ ಕಳವು ಕೃತ್ಯ ಎಸಗಿದ್ದಾರೆ.
ಕೃತ್ಯದ ಬಗ್ಗೆ ಅನುಮಾನಗೊಂಡ ಸ್ಥಳೀಯ ಅಂಗಡಿಯ ಸೆಕ್ಯೂರಿಟಿ ಗಾರ್ಡ್ ಘಟನಾ ಸ್ಥಳದತ್ತ ಹೋದಾಗ ದುಷ್ಟರ್ಮಿಗಳು ಪಿಸ್ತೂಲ್ ತೋರಿಸಿ, ಬೆದರಿಸಿದ್ದಾರೆಂಬ ಮಾಹಿತಿ ಲಭಿಸಿದೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಎಸ್ ಐ ತೇಜಸ್ವಿ ಹಾಗೂ ಸಿಬ್ಬಂದಿಗಳು ತೆರಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…