ಕಾರ್ಕಳ: ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪಿಯೂ ನೇಣಿಗೆ ಕೊರಳೊಡ್ಡಿದ್ದಾನೆ.
ಮೃತನನ್ನು ಸಂತೋಷ್ ಯಾನೆ ಹರಿತನಯ ದೇವಾಡಿಗ ಎಂದು ಗುರುತಿಸಲಾಗಿದೆ. ಈತ ಈದು ಗ್ರಾಮದ ಹಾಡಿಯಲ್ಲಿ ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ. 3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದ.
ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ ಪ್ರವೀಳಾ ಜು.14ರ ಬೆಳಿಗ್ಗೆ ಮನೆಯಿಂದ ಬ್ಯಾಂಕ್ ಗೆ ಆಗಮಿಸಿ ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಕುರಿತಂತೆ ಪ್ರಮೀಳಾರವರ ಸಹೋದರ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಯುತ್ತಿತ್ತು.
ಶನಿವಾರದಿಂದ ನಾಪತ್ತೆಯಾಗಿದ್ದ ಸಂತೋಷ್ ಈದುವಿನ ಮನೆಯೊಂದರಿಂದ ಹಗ್ಗ ಕೊಂಡುಹೋಗಿದ್ದ ಎನ್ನಲಾಗಿದೆ. ಇದೀಗ ಈದು ಮಾಪಾಲು ಹಾಡಿಯೊಂದರಲ್ಲಿ ಸಂತೋಷ್ ಶವ ಆತ್ಮಹತ್ಯೆಗೈದ ರೀತಿಯಲ್ಲಿ ಪತ್ತೆಯಾಗಿದೆ. ಶವ ಕೊಳೆತು ಹೋಗಿದ್ದು ಆತ್ಮಹತ್ಯೆಗೈದು ಎರಡು ದಿನ ಆಗಿರಬಹುದು ಎಂದು ಅಂದಾಜಿಸಲಾಗಿದೆ.
ಸಂತೋಷ್ ಯಾನೆ ಹರಿತನಯ ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾನೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…