ಕಾರ್ಕಳ, : ಕೊರೊನಾ ಮಹಾಮಾರಿ ಮೂರನೆ ಅಲೆ ತಡೆಗಟ್ಟಲು ಸರ್ವರು ಸನ್ನದ್ಧರಾಗಬೇಕು,ಅದಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಆಸ್ಪತ್ರೆ, ವೈದ್ಯರ ನೇಮಕ ಇವೆಲ್ಲ ಸಿದ್ಧತೆಗಳ ಕುರಿತು ಅಧಿಕಾರಿಗಳ ಜತೆ ಪೂರ್ವಭಾವಿ ಸಭೆಯನ್ನು ಈಗಾಗಲೇ ನಡೆಸಿದ್ದು, ಹೆಚ್ಚುವರಿ ತಜ್ಞರು ಮತ್ತು ಮಕ್ಕಳ ತಜ್ಞರ ನೇಮಕಕ್ಕೆ ಸಂಬಂದಿಸಿ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಶಾಸಕ ಹಾಗೂ ಸರಕಾರದ ಮುಖ್ಯ ಸಚೇತಕ ವಿ.ಸುನೀಲ್ಕುಮಾರ್ ಹೇಳಿದ್ದಾರೆ.
ಉದ್ಯಮಿ ಮಹಮ್ಮದ್ ಗೌಸ್ ತಾಲೂಕು ಕಚೇರಿಗೆ ಕೊಡಮಾಡಿದ ಮಾಸ್ಕ್, ಸ್ಯಾನಿಟೈಸರ್ ಮೊದಲಾದ ವೈದ್ಯಕೀಯ ಸಾಮಗ್ರಿಗಳನ್ನು ಪ್ರವಾಸಿ ಮಂದಿರದಲ್ಲಿ ಹಸ್ತಾಂತರಿಸಿ ಮಾತನಾಡಿದ ಅವರು, “ಮೂರನೆ ಸೋಂಕಿನ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರುವ ಬಗ್ಗೆ ತಜ್ಞರು, ವೈದ್ಯರು ಸೂಚನೆ ನೀಡಿದ್ದಾರೆ. ಮಕ್ಕಳ ಮೇಲೆ ಹೆಚ್ಚು ಪರಿಣಾಮ ಎನ್ನುತ್ತಿದ್ದರೂ ಖಚಿತವಾಗಿ ಹೇಳಲು ಅಸಾಧ್ಯ. ಹೆಚ್ಚಿನ ಹಾನಿ ತಪ್ಪಿಸಲು ಮುನ್ನೆಚ್ಚರಿಕೆಯಾಗಿ ಬೇಕಾದ ಕ್ರಮ ವಹಿಸಲಾಗಿದೆ”ಎಂದರು.
ಲಸಿಕೆ ವಿತರಣೆಯಲ್ಲಿ ಜಿಲ್ಲೆಯಲ್ಲಿ ಕಾರ್ಕಳ ತಾಲೂಕು ಮುಂಚೂಣಿಯಲ್ಲಿದ್ದು, ಸೋಂಕು ತಡೆ ವಿರುದ್ಧದ ಸಮರ ಮುಂದುವರೆಯುತ್ತಿದ್ದು ಶೀಘ್ರ ಕೊರೊನಾ ಮುಕ್ತರಾಗಲಿದ್ದೇವೆ” ಎಂದು ಹೇಳಿದ್ದಾರೆ.
ಉದ್ಯಮಿ ಮಹಮ್ಮದ್ ಗೌಸ್ರವರು ಪತ್ರಕರ್ತರ ಸಂಘದ ಸದಸ್ಯರಿಗೆ ಆಕ್ಸಿಮೀಟರ್ರನ್ನು ಇದೇ ಸಂದರ್ಭ ವಿತರಿಸಿ ಪತ್ರಕರ್ತರ ಕಾರ್ಯಸಾಧನೆ ಕೊಂಡಾಡಿದರು.
ಪತ್ರಕರ್ತರ ಸಂಘದ ಅಧ್ಯಕ್ಷ ಮಹಮ್ಮದ್ ಶರೀಪ್, ಜಿಲ್ಲಾ ಸಮಿತಿ ಉಪಾಧ್ಯಕ್ಷ ಆರ್.ಬಿ. ಜಗದೀಶ್, ಜಿಲ್ಲಾ ಸಮಿತಿಯ ಹರಿಪ್ರಸಾದ್ ನಂದಳಿಕೆ, ಕಾರ್ಯದರ್ಶಿ ಕೃಷ್ಣ ಅಜೆಕಾರ್ ಮೊದಲಾದವರು ಉಪಸ್ಥಿತರಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…