ಕಾರ್ಕಳ : ಕಾರ್ಕಳ ಹಿರ್ಗಾನದ ಶ್ರೀ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿಯನ್ನು ಸೌಕೂರು ಮೇಳದ ಭಾಗವತ ಡಾ.ರವಿಕುಮಾರ್ ಸೂರಾಲು ಅವರಿಗೆ ಪ್ರದಾನ ಮಾಡಲಾಯಿತು.
ಪಂಚ ಮೇಳಗಳ ಸಂಸ್ಥಾಪಕ ಕಿಶನ್ ಹೆಗ್ಡೆ ಮಾತನಾಡಿ, “ಯಕ್ಷಗಾನ ಉಳಿಸಿ ಬೆಳೆಸಲು ಎಲ್ಲರೂ ಬಯಲಾಟ ಆಡಿಸಬೇಕಾಗಿಲ್ಲ. ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಹತ್ತುಸಮಸ್ತರು ಒಟ್ಟಾಗಿ ಆಟ ಆಡಿಸುವ ಮೂಲಕ ಕಲಾವಿದರನ್ನು ಆದರಿಸಬಹುದು” ಎಂದರು.
“ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಅಂತಾರಾಷ್ಟ್ರೀಯ ಮನ್ನಣೆ ಇದೆ. ಆರಂಭದಲ್ಲಿ ಈ ಪ್ರಶಸ್ತಿ ಬಂದಾಗ ಸಾಮಾಜಿಕ ಜಾಲತಾಣಗಳು ಸಕ್ರಿಯವಾಗಿರದ ಕಾಲದಲ್ಲೂ ದೇಶ- ವಿದೇಶಗಳಿಂದ ಅಭಿನಂದನೆಗಳ ಮಹಾಪೂರವೇ ಬಂದಿತ್ತು” ಎಂದರು.
“ಯಕ್ಷಗಾನದಲ್ಲಿ ಡಾಕ್ಟರೇಟ್ ಮಾಡಿದ ಸರಳ, ಪ್ರತಿಭಾನ್ವಿತ ಭಾಗವತರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಅಭಿನಂದನೀಯ” ಎಂದರು.
ಪ್ರಶಸ್ತಿ ಸ್ವೀಕರಿಸಿದ ಡಾ. ರವಿ ಸೂರಾಲು ಮಾತನಾಡಿ, “ಕೊರೊನಾ ಸಂಕಷ್ಟಕಾಲದಲ್ಲಿ ಕಲಾವಿದರಿಗೆ ವೇತನ ನೀಡಿದ ಸಮರ್ಥ ಯಜಮಾನ ಕಿಶನ್ ಹೆಗ್ಡೆ. ಇಂಥ ಕಲಾಪೋಷಕರೇ ಯಕ್ಷಗಾನಕ್ಕೆ ಆಸರೆ” ಎಂದರು.
ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿದರು. ಸೃಷ್ಟಿ ಕಲಾವಿದ್ಯಾಲಯದ ಸಂಸ್ಥಾಪಕ ಛಾಯಾಪತಿ ಕಂಚಿಬೈಲು, ಧರ್ಮದರ್ಶಿ ಕೃಷ್ಣರಾಜೇಂದ್ರ ಭಟ್, ವೇದಮೂರ್ತಿ ರವೀಂದ್ರ ಭಟ್, ಉದ್ಯಮಿ ಸಚ್ಚಿದಾನಂದ ಎಡಮಲೆ, ರಮಾನಂದ ತೆಂಡುಲ್ಕರ್ ಇದ್ದರು.
ಮಹಾತ್ಮ ಗಾಂಧೀಜಿ ಅವರ 73ನೇ ಪುಣ್ಯತಿಥಿ : ರಾಷ್ಟ್ರಪತಿ, ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಸ್ಮರಣೆ -Vishwanews24
ಇದೇ ಸಂದರ್ಭ ಸೌಕೂರು ಮೇಳದವರಿಂದ ಪುಷ್ಪಚಂದನ ಯಕ್ಷಗಾನ ಬಯಲಾಟ ನಡೆಯಿತು.ಶ್ರೀಕ್ಷೇತ್ರದಲ್ಲಿ ವರ್ಷಾವಧಿ ಮಹೋತ್ಸವ, ಅನ್ನಸಂತರ್ಪಣೆ, ರಂಗಪೂಜೆ, ಭೂತ ಬಲಿ, ನೇಮೋತ್ಸವ, ಸಂಪ್ರೋಕ್ಷಣೆ ನಡೆಯಿತು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…