ಕಾರ್ಕಳ: ಶ್ರೀ ಕ್ಷೇತ್ರ ಧರ್ಮ ಸ್ಥಳದ ಹೆಗ್ಗಡೆಯವರು ಒಂದು ಕ್ಷೇತ್ರವನ್ನು ಕೇಂದ್ರವಾಗಿ ಇಟ್ಟು ಕೊಂಡು ನೂರಾರು ಸಾಮಾಜಿಕ ಕೆಲಸ ಕಾರ್ಯ ಮಾಡುತ್ತ ಬಂದಿದ್ದಾರೆ. ಉಪಕಾರ ಸ್ಮರಣೆಯನ್ನು ಸಮಾಜ ಮರೆತರೆ ಆ ಸಮಾಜದ ಅಂತಃಸತ್ವ ಕಡಿಮೆಯಾಗುತ್ತದೆ. ಧರ್ಮಕ್ಕೆ ಎಂದೂ ಅಪಚ್ಯುತಿ ಬರಬಾರದು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಹಿತರಕ್ಷಣ ಸಮಿತಿ ವತಿಯಿಂದ ಕಾರ್ಕಳದ ಕುಕ್ಕುಂದೂರು ಪಂ.ಮೈದಾನದಲ್ಲಿ ರವಿವಾರ ನಡೆದ ಧರ್ಮ ಸಂರಕ್ಷಣ ಸಮಾವೇಶದಲ್ಲಿ ಅವರು ಮಾತನಾಡಿದರು.
ಸತ್ಯದ ಅನ್ವೇಷಣೆ ಆಗಬೇಕು. ಸೌಜನ್ಯಾ ಎನ್ನುವ ಮುಗ್ಧ ಮಗುವಿಗೆ ನ್ಯಾಯ ಸಿಗಬೇಕು. ಧರ್ಮ ರಕ್ಷಣೆಯಾಗಬೇಕು, ಕಾನೂನಿಗೂ ಬೆಲೆ ಬರುವಂತಾಗಲಿ ಎಂದರು.
ಸಾಣೂರು ದೇಂದಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀರಾಮ್ ಭಟ್, ಜಂಗಮ ಸಂಸ್ಥಾನ ಮಠದ ರುದ್ರಮಣಿ ಮಹಾಸ್ವಾಮಿ, ಉಜಿರೆ ಅಶೋಕ್ ಭಟ…, ಸಹನಾ ಕುಂದರ್ ಸೂಡ, ನ್ಯಾಯವಾದಿಗಳಾದ ಅರುಣ್ ಬಂಗೇರ, ಎಂ.ಕೆ. ವಿಜಯ ಕುಮಾರ್, ಜ್ಞಾನಸುಧಾ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಡಾ| ಸುಧಾಕರ ಶೆಟ್ಟಿ, ಶ್ರೀಪತಿ ಭಟ್ ಪುತ್ತಿಗೆ, ವಸಂತ ಗಿಳಿಯಾರ್, ರಾಕೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ನೀರೆ ಕೃಷ್ಣ ಶೆಟ್ಟಿ ಸ್ವಾಗತಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…