Featured

ಕಾರ್ಕಳ: ಸೌಜನ್ಯಾ ಎನ್ನುವ ಮುಗ್ಧ ಮಗುವಿಗೆ ನ್ಯಾಯ ಸಿಗಬೇಕು, ಧರ್ಮ ರಕ್ಷಣೆಯಾಗಬೇಕು : ವಜ್ರದೇಹಿ ಶ್ರೀ – Vishwanews24

ಕಾರ್ಕಳ: ಸೌಜನ್ಯಾ ಎನ್ನುವ ಮುಗ್ಧ ಮಗುವಿಗೆ ನ್ಯಾಯ ಸಿಗಬೇಕು, ಧರ್ಮ ರಕ್ಷಣೆಯಾಗಬೇಕು : ವಜ್ರದೇಹಿ ಶ್ರೀ

ಕಾರ್ಕಳ: ಶ್ರೀ ಕ್ಷೇತ್ರ ಧರ್ಮ ಸ್ಥಳದ ಹೆಗ್ಗಡೆಯವರು ಒಂದು ಕ್ಷೇತ್ರವನ್ನು ಕೇಂದ್ರವಾಗಿ ಇಟ್ಟು ಕೊಂಡು ನೂರಾರು ಸಾಮಾಜಿಕ ಕೆಲಸ ಕಾರ್ಯ ಮಾಡುತ್ತ ಬಂದಿದ್ದಾರೆ. ಉಪಕಾರ ಸ್ಮರಣೆಯನ್ನು ಸಮಾಜ ಮರೆತರೆ ಆ ಸಮಾಜದ ಅಂತಃಸತ್ವ ಕಡಿಮೆಯಾಗುತ್ತದೆ. ಧರ್ಮಕ್ಕೆ ಎಂದೂ ಅಪಚ್ಯುತಿ ಬರಬಾರದು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಹಿತರಕ್ಷಣ ಸಮಿತಿ ವತಿಯಿಂದ ಕಾರ್ಕಳದ ಕುಕ್ಕುಂದೂರು ಪಂ.ಮೈದಾನದಲ್ಲಿ ರವಿವಾರ ನಡೆದ ಧರ್ಮ ಸಂರಕ್ಷಣ ಸಮಾವೇಶದಲ್ಲಿ ಅವರು ಮಾತನಾಡಿದರು.

ಸತ್ಯದ ಅನ್ವೇಷಣೆ ಆಗಬೇಕು. ಸೌಜನ್ಯಾ ಎನ್ನುವ ಮುಗ್ಧ ಮಗುವಿಗೆ ನ್ಯಾಯ ಸಿಗಬೇಕು. ಧರ್ಮ ರಕ್ಷಣೆಯಾಗಬೇಕು, ಕಾನೂನಿಗೂ ಬೆಲೆ ಬರುವಂತಾಗಲಿ ಎಂದರು.

 

ಸಾಣೂರು ದೇಂದಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀರಾಮ್‌ ಭಟ್‌, ಜಂಗಮ ಸಂಸ್ಥಾನ ಮಠದ ರುದ್ರಮಣಿ ಮಹಾಸ್ವಾಮಿ, ಉಜಿರೆ ಅಶೋಕ್‌ ಭಟ…, ಸಹನಾ ಕುಂದರ್‌ ಸೂಡ, ನ್ಯಾಯವಾದಿಗಳಾದ ಅರುಣ್‌ ಬಂಗೇರ, ಎಂ.ಕೆ. ವಿಜಯ ಕುಮಾರ್‌, ಜ್ಞಾನಸುಧಾ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಡಾ| ಸುಧಾಕರ ಶೆಟ್ಟಿ, ಶ್ರೀಪತಿ ಭಟ್‌ ಪುತ್ತಿಗೆ, ವಸಂತ ಗಿಳಿಯಾರ್‌, ರಾಕೇಶ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ನೀರೆ ಕೃಷ್ಣ ಶೆಟ್ಟಿ ಸ್ವಾಗತಿಸಿದರು.

Vishwa News 24

Recent Posts

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

10 minutes ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago