ಕಾರ್ಕಳ: ಶ್ರೀ ಕ್ಷೇತ್ರ ಧರ್ಮ ಸ್ಥಳದ ಹೆಗ್ಗಡೆಯವರು ಒಂದು ಕ್ಷೇತ್ರವನ್ನು ಕೇಂದ್ರವಾಗಿ ಇಟ್ಟು ಕೊಂಡು ನೂರಾರು ಸಾಮಾಜಿಕ ಕೆಲಸ ಕಾರ್ಯ ಮಾಡುತ್ತ ಬಂದಿದ್ದಾರೆ. ಉಪಕಾರ ಸ್ಮರಣೆಯನ್ನು ಸಮಾಜ ಮರೆತರೆ ಆ ಸಮಾಜದ ಅಂತಃಸತ್ವ ಕಡಿಮೆಯಾಗುತ್ತದೆ. ಧರ್ಮಕ್ಕೆ ಎಂದೂ ಅಪಚ್ಯುತಿ ಬರಬಾರದು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಹಿತರಕ್ಷಣ ಸಮಿತಿ ವತಿಯಿಂದ ಕಾರ್ಕಳದ ಕುಕ್ಕುಂದೂರು ಪಂ.ಮೈದಾನದಲ್ಲಿ ರವಿವಾರ ನಡೆದ ಧರ್ಮ ಸಂರಕ್ಷಣ ಸಮಾವೇಶದಲ್ಲಿ ಅವರು ಮಾತನಾಡಿದರು.
ಸತ್ಯದ ಅನ್ವೇಷಣೆ ಆಗಬೇಕು. ಸೌಜನ್ಯಾ ಎನ್ನುವ ಮುಗ್ಧ ಮಗುವಿಗೆ ನ್ಯಾಯ ಸಿಗಬೇಕು. ಧರ್ಮ ರಕ್ಷಣೆಯಾಗಬೇಕು, ಕಾನೂನಿಗೂ ಬೆಲೆ ಬರುವಂತಾಗಲಿ ಎಂದರು.
ಸಾಣೂರು ದೇಂದಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀರಾಮ್ ಭಟ್, ಜಂಗಮ ಸಂಸ್ಥಾನ ಮಠದ ರುದ್ರಮಣಿ ಮಹಾಸ್ವಾಮಿ, ಉಜಿರೆ ಅಶೋಕ್ ಭಟ…, ಸಹನಾ ಕುಂದರ್ ಸೂಡ, ನ್ಯಾಯವಾದಿಗಳಾದ ಅರುಣ್ ಬಂಗೇರ, ಎಂ.ಕೆ. ವಿಜಯ ಕುಮಾರ್, ಜ್ಞಾನಸುಧಾ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಡಾ| ಸುಧಾಕರ ಶೆಟ್ಟಿ, ಶ್ರೀಪತಿ ಭಟ್ ಪುತ್ತಿಗೆ, ವಸಂತ ಗಿಳಿಯಾರ್, ರಾಕೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ನೀರೆ ಕೃಷ್ಣ ಶೆಟ್ಟಿ ಸ್ವಾಗತಿಸಿದರು.
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…